AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕಚೇರಿ ಮೇಲೆ ಎಸಿಬಿ ದಾಳಿ; ನೂರಾರು ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಪತ್ತೆ

ಎಸಿಬಿ ಅಧಿಕಾರಿಗಳು ಇನ್ನೂ ದಾಳಿ ಮುಂದುವರಿಸಿದ್ದಾರೆ. ಮಾಲ್‌, MNC, ಅಪಾರ್ಟ್‌ಮೆಂಟ್‌ಗೆ ತೆರಿಗೆ ಹಾಕದೆ ವಂಚನೆ ಮಾಡಲಾಗಿದೆ. ಪಾಲಿಕೆ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಪತ್ರ ನೀಡಿರುವ ಬಗ್ಗೆ ಮಾಹಿತಿ ಲಭಿಸಿದೆ.

BBMP ಕಚೇರಿ ಮೇಲೆ ಎಸಿಬಿ ದಾಳಿ; ನೂರಾರು ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಪತ್ತೆ
ಎಸಿಬಿ ದಾಳಿ
TV9 Web
| Updated By: ganapathi bhat|

Updated on: Feb 28, 2022 | 9:29 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕಚೇರಿಗಳ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿಯಲ್ಲಿ ನೂರಾರು ಕೋಟಿಗೂ ಹೆಚ್ಚು ಅಕ್ರಮ‌ ಪತ್ತೆ ಆಗಿದೆ. ಕಂದಾಯ ವಿಭಾಗದಲ್ಲೇ 500 ಕೋಟಿಗೂ ಹೆಚ್ಚು ಅಕ್ರಮ‌ ಆಗಿರುವುದು ಪತ್ತೆ ಆಗಿದೆ. ಎಸಿಬಿ ಅಧಿಕಾರಿಗಳು ಇನ್ನೂ ದಾಳಿ ಮುಂದುವರಿಸಿದ್ದಾರೆ. ಮಾಲ್‌, MNC, ಅಪಾರ್ಟ್‌ಮೆಂಟ್‌ಗೆ ತೆರಿಗೆ ಹಾಕದೆ ವಂಚನೆ ಮಾಡಲಾಗಿದೆ. ಪಾಲಿಕೆ ಅಧಿಕಾರಿಗಳು ಅಕ್ರಮವಾಗಿ ಸ್ವಾಧೀನ ಪತ್ರ ನೀಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಂಜೂರಾತಿ ಮಾಡಲಾಗಿದೆ. ಕಾಮಗಾರಿ ನಡೆಸದಿದ್ದರೂ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲಾಗಿದೆ. ಹಲವು ಬಹುರಾಷ್ಟ್ರೀಯ ಕಂಪನಿಗಳಿಗೆ ಅಕ್ರಮವಾಗಿ ಟಿಡಿಆರ್‌ ನೀಡಲಾಗಿದೆ. ಈ ಬಗ್ಗೆ ದಾಖಲಾತಿ ವಶಪಡಿಸಿಕೊಂಡಿರುವ ಅಧಿಕಾರಿಗಳು, ನಾಳೆಯೂ ಎಸಿಬಿ ಅಧಿಕಾರಿಗಳ ದಾಳಿ ಮುಂದುವರಿಸಲಿದ್ದಾರೆ.

ಇತರ ಅಪರಾಧ ಸುದ್ದಿಗಳು

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಬಿಳಿಜಾಜಿ ಗ್ರಾಮದ ಬಳಿ ರಾಜೀವ್ ಗಾಂಧಿ ವಸತಿ ಸಮುಚ್ಚಯ ಕಾಮಗಾರಿ ಜಾಗದಲ್ಲಿ ದರೋಡೆ ಕೃತ್ಯ ನಡೆದಿದೆ. ಭದ್ರತಾ ಸಿಬ್ಬಂದಿ, ಲಾರಿ ಚಾಲಕನನ್ನು ಹೆದರಿಸಿ 5 ಲಕ್ಷ ಬೆಲೆಬಾಳುವ ವಸ್ತುಗಳು 5 ಮೊಬೈಲ್, 8 ಸಾವಿರ ನಗದು ದರೋಡೆ ಮಾಡಲಾಗಿದೆ. 10 ರಿಂದ 15 ದುಷ್ಕರ್ಮಿಗಳು ದೊಣ್ಣೆ, ಚಾಕು, ರಾಡ್ ತೋರಿಸಿ ಬೆದರಿಸಿ ದರೋಡೆ ಮಾಡಿದ ಬಳಿಕ ರೂಂನಲ್ಲಿ ಕೂಡಿಹಾಕಿ ಎಸ್ಕೇಪ್ ಆಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕಂಪನಿ ಮ್ಯಾನೇಜರ್ ಶಿವು ಅವರಿಂದ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಲಾಗಿದೆ.

ಬಳ್ಳಾರಿ: ನಗರದ ಹಂದ್ರಾಳ ಕಾಲೋನಿಯ ಡಿಸಿ ಕ್ಯಾಂಪ್‌ನ ಮನೆಯಲ್ಲಿ ಆಂಧ್ರ ಮೂಲದ ಸುನೀತಾ (24) ಅನುಮಾನಾಸ್ಪದ ಸಾವನ್ನಪ್ಪಿದ್ದಾರೆ. ಸುನೀತಾಗೆ ಪರಿಚಿತನಾಗಿದ್ದ ಮೂರ್ತಿ ಎನ್ನುವ ವ್ಯಕ್ತಿಯಿಂದ‌ ಕೊಲೆ ಶಂಕೆ ವ್ಯಕ್ತವಾಗಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಯಾದಗಿರಿ: ಶಹಾಪುರ‌ ತಾಲೂಕಿನ ದೋರನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಐವರು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ, ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತೆ ಎಂದುಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Crime Updates: ಚಾಕಲೇಟ್ ಬಾಕ್ಸ್ ಕದ್ದೊಯ್ದ ಕಳ್ಳ, ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಕ್ಕಳು ಆತ್ಮಹತ್ಯೆ

ಇದನ್ನೂ ಓದಿ: Crime News: ನೀನು ಜಗತ್ತಿನ ಬೆಸ್ಟ್​ ಅಮ್ಮ, ನನ್ನ ದೇವತೆ; ಸೂಸೈಡ್ ನೋಟ್ ಬರೆದಿಟ್ಟು 15ನೇ ಮಹಡಿಯಿಂದ ಹಾರಿದ ಬಾಲಕ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!