AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ
ಅಪಘಾತ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 29, 2023 | 10:31 AM

Share

ಬೆಂಗಳೂರು ಅ.29: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಅ.28)  ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಬಿಎಸ್​ಎಫ್ (BSF) ಉದ್ಯೋಗಿ ಸುಧಾಕರ್ ಮತ್ತು ಯೂಟ್ಯೂಬರ್ ಗಣಿ ಮೃತ ದುರ್ದೈವಿಗಳು. ಸುಧಾಕರ್ ರಾಯಲ್ ಎನ್ಫೀಲ್ಡ್ ಬೈಕ್​ನಲ್ಲಿ ​ವೇಗವಾಗಿ ಬಿಎಸ್​​ಎಫ್ ಕಾಂಪೌಂಡ್​​ನಿಂದ ಹೊರಗೆ ಬರುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಗಣಿ ಎಂಬುವರು ಬೈಕ್​​ನಿಂದ ಸುಧಾಕರ್​ ಅವರ ಬೈಕ್​​​ಗೆ ಗುದ್ದಿದ್ದಾರೆ.

ಅಪಘಾತದಲ್ಲಿ ಸುಧಾಕರ್​​ ಸ್ಥಳದಲ್ಲೇ ಮೃಪಟ್ಟಿದ್ದಾರೆ. ಅವಘಡದಲ್ಲಿ ಗಾಯಗೊಂಡಿದ್ದ ಗಣಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುಧಾಕರ್​​​ ನಿವೃತ್ತ ಯೋಧ ನಾಗಪ್ಪನ್ ಅವರ ಪುತ್ರರಾಗಿದ್ದು, ಬಿಎಸ್​ಎಫ್ ಕಚೇರಿಯಲ್ಲಿ ಹೆಡ್​ಕುಕ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು. ಬಿಎಸ್​ಎಫ್​ನಲ್ಲಿ ಕಳೆದ 22 ವರ್ಷಗಳಿಂದ ಕರ್ತವ್ಯ ನಿರ್ವಹಿಸುತಿದ್ದರು. ಸುಧಾಕರ್ ಮೂಲತಃ ತಮಿಳುನಾಡಿನ ವೆಲ್ಲೂರಿನವರಾಗಿದ್ದಾರೆ. ಸುಧಾಕರ್​ ಪತ್ನಿ, ಮಕ್ಕಳು ಹಾಗೂ ತಂದೆ ವೆಲ್ಲೂರಿನಲ್ಲಿ ವಾಸವಾಗಿದ್ದಾರೆ. ಸುಧಾಕರ್ ರೂಂ ಮಾಡಿಕೊಂಡು ವಿನಾಯಕ ನಗರದಲ್ಲಿ ವಾಸವಾಗಿದ್ದರು.

ಪ್ರಕರಣ ಸಂಬಂಧ ಗಣಿ ಅಲಿಯಾಸ್ ಗಿರೀಶ್ ವಿರುದ್ಧ ಯಲಹಂಕ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರು ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 29 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?