AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ
ಅಪಘಾತ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on:Oct 29, 2023 | 10:31 AM

Share

ಬೆಂಗಳೂರು ಅ.29: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಅ.28)  ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಬಿಎಸ್​ಎಫ್ (BSF) ಉದ್ಯೋಗಿ ಸುಧಾಕರ್ ಮತ್ತು ಯೂಟ್ಯೂಬರ್ ಗಣಿ ಮೃತ ದುರ್ದೈವಿಗಳು. ಸುಧಾಕರ್ ರಾಯಲ್ ಎನ್ಫೀಲ್ಡ್ ಬೈಕ್​ನಲ್ಲಿ ​ವೇಗವಾಗಿ ಬಿಎಸ್​​ಎಫ್ ಕಾಂಪೌಂಡ್​​ನಿಂದ ಹೊರಗೆ ಬರುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಗಣಿ ಎಂಬುವರು ಬೈಕ್​​ನಿಂದ ಸುಧಾಕರ್​ ಅವರ ಬೈಕ್​​​ಗೆ ಗುದ್ದಿದ್ದಾರೆ.

ಅಪಘಾತದಲ್ಲಿ ಸುಧಾಕರ್​​ ಸ್ಥಳದಲ್ಲೇ ಮೃಪಟ್ಟಿದ್ದಾರೆ. ಅವಘಡದಲ್ಲಿ ಗಾಯಗೊಂಡಿದ್ದ ಗಣಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುಧಾಕರ್​​​ ನಿವೃತ್ತ ಯೋಧ ನಾಗಪ್ಪನ್ ಅವರ ಪುತ್ರರಾಗಿದ್ದು, ಬಿಎಸ್​ಎಫ್ ಕಚೇರಿಯಲ್ಲಿ ಹೆಡ್​ಕುಕ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು. ಬಿಎಸ್​ಎಫ್​ನಲ್ಲಿ ಕಳೆದ 22 ವರ್ಷಗಳಿಂದ ಕರ್ತವ್ಯ ನಿರ್ವಹಿಸುತಿದ್ದರು. ಸುಧಾಕರ್ ಮೂಲತಃ ತಮಿಳುನಾಡಿನ ವೆಲ್ಲೂರಿನವರಾಗಿದ್ದಾರೆ. ಸುಧಾಕರ್​ ಪತ್ನಿ, ಮಕ್ಕಳು ಹಾಗೂ ತಂದೆ ವೆಲ್ಲೂರಿನಲ್ಲಿ ವಾಸವಾಗಿದ್ದಾರೆ. ಸುಧಾಕರ್ ರೂಂ ಮಾಡಿಕೊಂಡು ವಿನಾಯಕ ನಗರದಲ್ಲಿ ವಾಸವಾಗಿದ್ದರು.

ಪ್ರಕರಣ ಸಂಬಂಧ ಗಣಿ ಅಲಿಯಾಸ್ ಗಿರೀಶ್ ವಿರುದ್ಧ ಯಲಹಂಕ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರು ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 29 October 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ