ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ

| Updated By: ವಿವೇಕ ಬಿರಾದಾರ

Updated on: Oct 29, 2023 | 10:31 AM

ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಬೆಂಗಳೂರಿನಲ್ಲಿ ಎರಡು ಬೈಕ್​ ಮಧ್ಯೆ ಡಿಕ್ಕಿ, ಬಿಎಸ್​ಎಫ್​ ಸಿಬ್ಬಂದಿ ಸೇರಿ ಇಬ್ಬರು ದುರ್ಮರಣ
ಅಪಘಾತ
Follow us on

ಬೆಂಗಳೂರು ಅ.29: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ (ಅ.28)  ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಬಿಎಸ್​ಎಫ್ (BSF) ಉದ್ಯೋಗಿ ಸುಧಾಕರ್ ಮತ್ತು ಯೂಟ್ಯೂಬರ್ ಗಣಿ ಮೃತ ದುರ್ದೈವಿಗಳು. ಸುಧಾಕರ್ ರಾಯಲ್ ಎನ್ಫೀಲ್ಡ್ ಬೈಕ್​ನಲ್ಲಿ ​ವೇಗವಾಗಿ ಬಿಎಸ್​​ಎಫ್ ಕಾಂಪೌಂಡ್​​ನಿಂದ ಹೊರಗೆ ಬರುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಗಣಿ ಎಂಬುವರು ಬೈಕ್​​ನಿಂದ ಸುಧಾಕರ್​ ಅವರ ಬೈಕ್​​​ಗೆ ಗುದ್ದಿದ್ದಾರೆ.

ಅಪಘಾತದಲ್ಲಿ ಸುಧಾಕರ್​​ ಸ್ಥಳದಲ್ಲೇ ಮೃಪಟ್ಟಿದ್ದಾರೆ. ಅವಘಡದಲ್ಲಿ ಗಾಯಗೊಂಡಿದ್ದ ಗಣಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತ ಸುಧಾಕರ್​​​ ನಿವೃತ್ತ ಯೋಧ ನಾಗಪ್ಪನ್ ಅವರ ಪುತ್ರರಾಗಿದ್ದು, ಬಿಎಸ್​ಎಫ್ ಕಚೇರಿಯಲ್ಲಿ ಹೆಡ್​ಕುಕ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು. ಬಿಎಸ್​ಎಫ್​ನಲ್ಲಿ ಕಳೆದ 22 ವರ್ಷಗಳಿಂದ ಕರ್ತವ್ಯ ನಿರ್ವಹಿಸುತಿದ್ದರು. ಸುಧಾಕರ್
ಮೂಲತಃ ತಮಿಳುನಾಡಿನ ವೆಲ್ಲೂರಿನವರಾಗಿದ್ದಾರೆ. ಸುಧಾಕರ್​ ಪತ್ನಿ, ಮಕ್ಕಳು ಹಾಗೂ ತಂದೆ ವೆಲ್ಲೂರಿನಲ್ಲಿ ವಾಸವಾಗಿದ್ದಾರೆ. ಸುಧಾಕರ್ ರೂಂ ಮಾಡಿಕೊಂಡು ವಿನಾಯಕ ನಗರದಲ್ಲಿ ವಾಸವಾಗಿದ್ದರು.

ಪ್ರಕರಣ ಸಂಬಂಧ ಗಣಿ ಅಲಿಯಾಸ್ ಗಿರೀಶ್ ವಿರುದ್ಧ ಯಲಹಂಕ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರು ದಾಖಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:10 am, Sun, 29 October 23