AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ

ಇಂದು(ಜು.9) ಮುಂಜಾನೆಯಿಂದ ಸರ್ಪ್ರೈಸ್ ವಿಸಿಟ್ ​ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್​ ಹಾಕುತ್ತಿದ್ದಾರೆ. ಅದರಂತೆ ಇದೀಗ ಡಿಸಿಎಂ ರೌಂಡ್ಸ್​ ವೇಳೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಗುದ್ದಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ
ಡಿಕೆ ಶಿವಕುಮಾರ್​
Anil Kalkere
| Edited By: |

Updated on:Jul 09, 2023 | 12:17 PM

Share

ಬೆಂಗಳೂರು: ಇಂದು(ಜು.9) ಮುಂಜಾನೆಯಿಂದ ಸರ್ಪ್ರೈಸ್ ವಿಸಿಟ್ ​ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(Dk Shivakumar) ಸಿಟಿ ರೌಂಡ್ಸ್​ ಹಾಕುತ್ತಿದ್ದಾರೆ. ಅದರಂತೆ ಇದೀಗ ಡಿಸಿಎಂ ರೌಂಡ್ಸ್​ ವೇಳೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಗುದ್ದಿದೆ. ಹೌದು ಮಾಗಡಿ ರೋಡ್​ನಲ್ಲಿ ಡಿಕೆ ಶಿವಕುಮಾರ್​ ಅವರನ್ನ ಹಿಂಬಾಲಿಸುತ್ತಿದ್ದ ಬಿಬಿಎಂಪಿ(BBMP) ಮುಖ್ಯ ಆಯುಕ್ತರು ಹಾಗೂ ವಿಶೇಷ ಆಯುಕ್ತರ ವಾಹನಗಳ ನಡುವೆ ಅಪಘಾತವಾಗಿದೆ. ಇನ್ನು ಈ ಘಟನೆ ಸಡನ್ ಬ್ರೇಕ್ ಹಾಕಿದ್ದಕ್ಕೆ ಸಂಭವಿಸಿದ್ದು, ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ.

ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿ, ಉಪಹಾರ ಸೇವಿಸಿದ್ದ ಡಿಕೆ ಶಿವಕುಮಾರ್​

ಇನ್ನು ಮುಂಜಾನೆ ತಮ್ಮ ಮನೆಯಿಂದ ಹೊರಟ್ಟಿದ್ದ ಡಿಸಿಎಂ ಡಿಕೆಶಿ ಅವರು ಇಂದಿರಾ ಕ್ಯಾಂಟೀನ್​ಗೆ ಉಪಹಾರ ಸೇವಿಸಲು ಹೋಗಿದ್ದು, ಅಲ್ಲಿನ ಸಿಬ್ಬಂದಿ, ಹಾಗೂ ಗ್ರಾಹಕರ ಜೊತೆ ಮಾತನಾಡುತ್ತಾ ತಿಂಡಿ ತಿಂದಿದ್ದರು. ಬಳಿಕ ಅಲ್ಲಿಂದ ಹೊರಟ ಅವರು ‘ದೊಡ್ಡಬಿದರುಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಮಾಸ್ಕ್, ತಲೆಗೆ ಹೆಲ್ಮೆಟ್ ಧರಿಸಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಇದನ್ನೂ ಓದಿ:ಬಾಲಸೋರ್ ರೈಲು ಅಪಘಾತ ಪ್ರಕರಣ: 3 ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ದಾರಿ ತಪ್ಪಿದ್ದ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ

ಬೆಂಗಳೂರಿನ 2 ಸ್ಥಳಗಳಿಗೆ ಡಿಕೆ ಶಿವಕುಮಾರ್ ಸರ್ಪ್ರೈಸ್ ವಿಸಿಟ್ ಮಾಡಲು ಹೊರಟು ಅವರು, ರಸ್ತೆಯಲ್ಲಿ ತೆರೆಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿತ್ತು. ಡಿಕೆ ಶಿವಕುಮಾರ್​ ಅವರ ವಾಹನ ಬಿಟ್ಟು ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ಬಂದಿದ್ದು, ಅಲ್ಲಿಯವರೆಗೆ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ ಘಟನೆ ನಡೆದಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Sun, 9 July 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ