AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ

ಇಂದು(ಜು.9) ಮುಂಜಾನೆಯಿಂದ ಸರ್ಪ್ರೈಸ್ ವಿಸಿಟ್ ​ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್​ ಹಾಕುತ್ತಿದ್ದಾರೆ. ಅದರಂತೆ ಇದೀಗ ಡಿಸಿಎಂ ರೌಂಡ್ಸ್​ ವೇಳೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಗುದ್ದಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್​ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ
ಡಿಕೆ ಶಿವಕುಮಾರ್​
Anil Kalkere
| Edited By: |

Updated on:Jul 09, 2023 | 12:17 PM

Share

ಬೆಂಗಳೂರು: ಇಂದು(ಜು.9) ಮುಂಜಾನೆಯಿಂದ ಸರ್ಪ್ರೈಸ್ ವಿಸಿಟ್ ​ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(Dk Shivakumar) ಸಿಟಿ ರೌಂಡ್ಸ್​ ಹಾಕುತ್ತಿದ್ದಾರೆ. ಅದರಂತೆ ಇದೀಗ ಡಿಸಿಎಂ ರೌಂಡ್ಸ್​ ವೇಳೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಗುದ್ದಿದೆ. ಹೌದು ಮಾಗಡಿ ರೋಡ್​ನಲ್ಲಿ ಡಿಕೆ ಶಿವಕುಮಾರ್​ ಅವರನ್ನ ಹಿಂಬಾಲಿಸುತ್ತಿದ್ದ ಬಿಬಿಎಂಪಿ(BBMP) ಮುಖ್ಯ ಆಯುಕ್ತರು ಹಾಗೂ ವಿಶೇಷ ಆಯುಕ್ತರ ವಾಹನಗಳ ನಡುವೆ ಅಪಘಾತವಾಗಿದೆ. ಇನ್ನು ಈ ಘಟನೆ ಸಡನ್ ಬ್ರೇಕ್ ಹಾಕಿದ್ದಕ್ಕೆ ಸಂಭವಿಸಿದ್ದು, ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ.

ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿ, ಉಪಹಾರ ಸೇವಿಸಿದ್ದ ಡಿಕೆ ಶಿವಕುಮಾರ್​

ಇನ್ನು ಮುಂಜಾನೆ ತಮ್ಮ ಮನೆಯಿಂದ ಹೊರಟ್ಟಿದ್ದ ಡಿಸಿಎಂ ಡಿಕೆಶಿ ಅವರು ಇಂದಿರಾ ಕ್ಯಾಂಟೀನ್​ಗೆ ಉಪಹಾರ ಸೇವಿಸಲು ಹೋಗಿದ್ದು, ಅಲ್ಲಿನ ಸಿಬ್ಬಂದಿ, ಹಾಗೂ ಗ್ರಾಹಕರ ಜೊತೆ ಮಾತನಾಡುತ್ತಾ ತಿಂಡಿ ತಿಂದಿದ್ದರು. ಬಳಿಕ ಅಲ್ಲಿಂದ ಹೊರಟ ಅವರು ‘ದೊಡ್ಡಬಿದರುಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಮಾಸ್ಕ್, ತಲೆಗೆ ಹೆಲ್ಮೆಟ್ ಧರಿಸಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಇದನ್ನೂ ಓದಿ:ಬಾಲಸೋರ್ ರೈಲು ಅಪಘಾತ ಪ್ರಕರಣ: 3 ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ದಾರಿ ತಪ್ಪಿದ್ದ ಡಿಕೆ ಶಿವಕುಮಾರ್ ಎಸ್ಕಾರ್ಟ್ ವಾಹನ

ಬೆಂಗಳೂರಿನ 2 ಸ್ಥಳಗಳಿಗೆ ಡಿಕೆ ಶಿವಕುಮಾರ್ ಸರ್ಪ್ರೈಸ್ ವಿಸಿಟ್ ಮಾಡಲು ಹೊರಟು ಅವರು, ರಸ್ತೆಯಲ್ಲಿ ತೆರೆಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿತ್ತು. ಡಿಕೆ ಶಿವಕುಮಾರ್​ ಅವರ ವಾಹನ ಬಿಟ್ಟು ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ಬಂದಿದ್ದು, ಅಲ್ಲಿಯವರೆಗೆ ಮಾರ್ಗ ಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ ಘಟನೆ ನಡೆದಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Sun, 9 July 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ