AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನಲ್ಲಿ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ದುರ್ಮರಣ, ಮೃತರು ಮಹಾರಾಷ್ಟ್ರದವರು

ಈ ಘಟನೆಯಿಂದ ಹೊರ ಬರುವ ಮುನ್ನವೇ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಳೂರು ಭೀಕರ ಅಪಘಾತ ನಡೆದಿದೆ.

ಆನೇಕಲ್​ನಲ್ಲಿ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ದುರ್ಮರಣ, ಮೃತರು ಮಹಾರಾಷ್ಟ್ರದವರು
ಲಾರಿ ಮತ್ತು ಆ್ಯಂಬುಲೆನ್ಸ್ ನಡುವೆ ಅಪಘಾತ ನಡೆದಿದೆ
TV9 Web
| Edited By: |

Updated on:Sep 16, 2021 | 10:35 AM

Share

ಆನೇಕಲ್: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತಗಳ (Accident) ಸಂಖ್ಯೆ ಹೆಚ್ಚಾಗುತ್ತಿದೆ. ಕೋರಮಂಗಲದಲ್ಲಿ ನಡೆದ ಅಪಘಾತ ಮಾಸುವ ಮುನ್ನವೇ ಸೆ. 14ರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ ನಡೆದಿತ್ತು. ಫ್ಲೈ ಓವರ್ ಮೇಲಿಂದ ಯುವಕ- ಯುವತಿ ಬಿದ್ದಿರುವ ದೃಶ್ಯ ಎದೆ ಜಲ್ಲ್ ಅನ್ನುವಂತಿತ್ತು. ಈ ಘಟನೆಯಿಂದ ಹೊರ ಬರುವ ಮುನ್ನವೇ ಇಂದು (ಸೆ.16) ಬೆಳ್ಳಂಬೆಳಗ್ಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನೆರಳೂರು ಗೇಟ್ ಬಳಿ ಲಾರಿ ಮತ್ತು ಆ್ಯಂಬುಲೆನ್ಸ್ ಮಧ್ಯೆ ಡಿಕ್ಕಿಯಾಗಿದೆ. ಆ್ಯಂಬುಲೆನ್ಸ್​​ನಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಗೆ ಹಿಂಬದಿಯಿಂದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ಮಹಾರಾಷ್ಟ್ರದಾಗಿದ್ದು, ಹೊಸೂರಿನತ್ತ ಹೋಗುತ್ತಿತ್ತು. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆ್ಯಂಬುಲೆನ್ಸ್​ನಲ್ಲಿದ್ದ ಮೂವರು ಪುರುಷರು ಮೃತಪಟ್ಟಿದ್ದಾರೆ. ನಾಲ್ವರು ಪುರುಷರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರದ ಡಾ.ಜಾಧವ್ ಅಶೋಕ್, ಚಾಲಕ ಬಬೀಯ, ಚೆನ್ನೈನ ಪೇಷಂಟ್ ಅನ್ವರ್ ಖಾನ್ ಮೃತ ದುರ್ದೈವಿಗಳು. ಅಹಮ್ಮದ್ ರಾಜ್​​ಶೇಖ್, ಡಾ.ಜಿತೇಂದ್ರ ಬಿರಾದರ್, ರೋಗಿಯ ಸಹೋದರ ಯೂಸೂಫ್ ಖಾನ್, ಆ್ಯಂಬುಲೆನ್ಸ್‌ ಚಾಲಕ ಅಸ್ಕಾನ್ ಮೆನಾನ್‌ಗೆ ಗಾಯ ಗಂಭೀರ ಗಾಯವಾಗಿದೆ.

ಮುಂಜಾನೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆ್ಯಂಬುಲೆನ್ಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ; ಫ್ಲೈ ಓವರ್​ ಮೇಲೆ ನಿಂತಿದ್ದ ಜೋಡಿಗೆ ವೇಗವಾಗಿ ಬಂದು ಗುದ್ದಿದ ಕಾರು, ಕೆಳಕ್ಕೆ ಬಿದ್ದು ಇಬ್ಬರೂ ಸಾವು

ವಿದ್ಯುತ್ ಸ್ಪರ್ಶಿಸಿ ಹುಟ್ಟುಹಬ್ಬದ ದಿನವೇ ಮೂರು ವರ್ಷದ ಬಾಲಕಿ ಸಾವು

(Accident between lorry and ambulance three members death in anekal)

Published On - 8:32 am, Thu, 16 September 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​