AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು

ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು
ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ,ಸಚಿವ ಮುನಿರತ್ನ
ಕಿರಣ್ ಹನುಮಂತ್​ ಮಾದಾರ್
|

Updated on:Mar 31, 2023 | 12:32 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Election) ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ(Munirathna) ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ಹೌದು ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ’ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕದ ಮೆಸ್ಸಾಚುಸೆಟ್ಸ್ ವಿಶ್ವವಿದ್ಯಾಲಯದಲ್ಲಿ, ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (2018 ರಲ್ಲಿ) ಗಳಿಸಿರುವ ಕುಸುಮಾ.ಎಚ್,  ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ.

ಇದನ್ನೂ ಓದಿ:K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

ರಾಜಕೀಯದ ಜೊತೆಗೆ ಸಮಾಜ ಸೇವೆ, ಬರವಣಿಗೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಕುಸುಮಾ ಅವರು  ಈಗಾಗಲೇ  ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ.  ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲೇ ಕುಸುಮಾ ಅವರ ಹೆಸರನ್ನು ಪ್ರಕಟಿಸಿದೆ. ಹೀಗಿದ್ದು ಹೇಗಾದರೂ ಮಾಡಿ ಈ ಬಾರಿ ಗೆಲುವು ಸಾಧಿಸಲು ಶಥಾಉ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಬಳಿಕ ಗೆಲುವು ಯಾರಿಗೆ ಒಲಿಯುತ್ತೆ ಕಾದುನೋಡಬೇಕಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Fri, 31 March 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು