AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು

ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಕನ್ನಡಿಗರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಹೇಳಿದ್ರಾ ಮುನಿರತ್ನ? ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ದೂರು
ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ,ಸಚಿವ ಮುನಿರತ್ನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 31, 2023 | 12:32 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Election) ಈಗಾಗಲೇ ದಿನಾಂಕ ನಿಗದಿಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ(Munirathna) ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ. ಹೌದು ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ’ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಅಮೆರಿಕದ ಮೆಸ್ಸಾಚುಸೆಟ್ಸ್ ವಿಶ್ವವಿದ್ಯಾಲಯದಲ್ಲಿ, ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (2018 ರಲ್ಲಿ) ಗಳಿಸಿರುವ ಕುಸುಮಾ.ಎಚ್,  ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ.

ಇದನ್ನೂ ಓದಿ:K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

ರಾಜಕೀಯದ ಜೊತೆಗೆ ಸಮಾಜ ಸೇವೆ, ಬರವಣಿಗೆಯಂತಹ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಕುಸುಮಾ ಅವರು  ಈಗಾಗಲೇ  ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ.  ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲೇ ಕುಸುಮಾ ಅವರ ಹೆಸರನ್ನು ಪ್ರಕಟಿಸಿದೆ. ಹೀಗಿದ್ದು ಹೇಗಾದರೂ ಮಾಡಿ ಈ ಬಾರಿ ಗೆಲುವು ಸಾಧಿಸಲು ಶಥಾಉ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣೆ ಬಳಿಕ ಗೆಲುವು ಯಾರಿಗೆ ಒಲಿಯುತ್ತೆ ಕಾದುನೋಡಬೇಕಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Fri, 31 March 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್