AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪೋಲೊ ಫಾರ್ಮಸಿಗಳಿಗೆ ನುಗ್ಗಿ ದರೋಡೆ ಮಾಡ್ತಿದ್ದ ಅರೋಪಿ ಬಂಧನ; ಇಲ್ಲಿದೆ ವಿವರ

ಬೆಂಗಳೂರು ನಗರದಲ್ಲಿ ನಡೆದಿದ್ದ ಹದಿಮೂರು ಡರೋಡೆಯನ್ನು ಈ ಒಬ್ಬನೇ ಮಾಡಿದ್ದು ಬೆಳಕಿಗೆ ಬಂದಿದೆ. ತನ್ನ ಸ್ಕೂಟರ್​ನಲ್ಲಿ ಬರುತ್ತಿದ್ದ ಅರೋಪಿ ಸಮಿ ಉದ್ದಿನ್, ಬೆಳಗ್ಗೆ ಮತ್ತು ರಾತ್ರಿ ಮೆಡಿಕಲ್ ತೆರೆಯುವಾಗ ಮತ್ತು ಬಾಗಿಲು ಹಾಕುವ ಸಮಯದಲ್ಲಿ ಒಬ್ಬರು ಮಾತ್ರ ಇರುತ್ತಾರೆ ಎಂದು ಪ್ಲಾನ್ ಮಾಡಿ ಈ ಕೃತ್ಯ ಎಸಗುತ್ತಿದ್ದ. ಇದೀಗ ಖತರ್ನಾಕ್​ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಅಪೋಲೊ ಫಾರ್ಮಸಿಗಳಿಗೆ ನುಗ್ಗಿ ದರೋಡೆ ಮಾಡ್ತಿದ್ದ ಅರೋಪಿ ಬಂಧನ; ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 19, 2023 | 2:46 PM

Share

ಬೆಂಗಳೂರು, ಅ.19: ಅಪೋಲೊ ಮತ್ತು ಮೆಡ್ ಪ್ಲೆಸ್ ಫಾರ್ಮಸಿಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ಅರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರು(Bengaluru) ನಗರದ ಹದಿಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೆಸಿ ನಗರ ನಿವಾಸಿ ಸಮಿ ಉದ್ದಿನ್ ಬಂಧಿತ ಅರೋಪಿ. ಇತ ರಾತ್ರಿ ವೇಳೆಯಲ್ಲಿ ಒಬ್ಬನೇ ಹೆಲ್ಮೆಟ್ ಹಾಕಿಕೊಂಡು ಅಪೋಲೊ ಪಾರ್ಮಸಿ(Apollo Pharmacy)ಗಳಿಗೆ ನುಗ್ಗುತಿದ್ದ. ಬಳಿಕ ಚಾಕು ತೋರಿಸಿ ಕ್ಯಾಶ್ ಬಾಕ್ಸ್​ನಿಂದ ಹಣ ಕೊಡುವಂತೆ ಬೆದರಿಸುತಿದ್ದ. ಈ ವೇಳೆ ಯಾರಾದರೂ ಹಣ ಕೊಡದೆ ಇದ್ದಾಗ ಚಾಕುವಿನಿಂದ ಇರಿದು ನಂತರ ಕ್ಯಾಶ್ ಬಾಕ್ಸ್​ನಲ್ಲಿರುವ ಹಣ ದೋಚಿ ಪರಾರಿ ಆಗುತ್ತಿದ್ದ. ಈ ಕುರಿತು ಹಲವು ದಿನಗಳ ಹಿಂದೆ ವಿವಿಧ ಪೊಲೀಸ್​ ಠಾಣೆಗಳಲ್ಲಿ ದೂರು ದಾಖಲಿಸಲಾಗಿತ್ತು. ಸದ್ಯ ವಿದ್ಯಾರಣ್ಯಪುರ ಪೊಲೀಸರು ಅರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ವಿದ್ಯಾರಣ್ಯಪುರದಲ್ಲಿ ವಿಫಲ ಯತ್ನ ಮಾಡಿದ್ದ ಅರೋಪಿ

ಇನ್ನು ವಿಚಾರಣೆ ವೇಳೆ ನಗರದಲ್ಲಿ ನಡೆದಿದ್ದ ಹದಿಮೂರು ಡರೋಡೆಯನ್ನು ಈ ಒಬ್ಬನೇ ಮಾಡಿದ್ದು ಬೆಳಕಿಗೆ ಬಂದಿದೆ. ತನ್ನ ಸ್ಕೂಟರ್​ನಲ್ಲಿ ಬರುತ್ತಿದ್ದ ಅರೋಪಿ ಸಮಿ ಉದ್ದಿನ್, ಬೆಳಗ್ಗೆ ಮತ್ತು ರಾತ್ರಿ ಕೃತ್ಯ ಎಸಗುತಿದ್ದ. ಮೆಡಿಕಲ್ ತೆರೆಯುವಾಗ ಮತ್ತು ಬಾಗಿಲು ಹಾಕುವ ಸಮಯದಲ್ಲಿ ಒಬ್ಬರು ಮಾತ್ರ ಇರುತ್ತಾರೆ ಎಂದು ಪ್ಲಾನ್ ಮಾಡಿ ಈ ಕೃತ್ಯ ಎಸಗುತ್ತಿದ್ದ. ಮಹಾನಗರದ ಹೆಚ್​ಎಸ್​ಆರ್ ಲೇಔಟ್, ಮಾರತ್ ಹಳ್ಳಿ, ಸರ್ಜಾಪುರ, ಮಹದೇವಪುರ, ರಾಮಮೂರ್ತಿ ನಗರ, ಕೆಂಗೇರಿ, ಹೆಬ್ಬಗೋಡಿ, ಬೆಳ್ಳಂದೂರು ಹಾಗೂ ಕೊತ್ತನೂರು ಸೇರಿದಂತೆ ಅನೇಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದರೋಡೆ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಗದಗ: ವೈದ್ಯರು ತಮ್ಮ ಮನಸ್ಸಿಗೆ ಬಂದಾಗ ಆಸ್ಪತ್ರೆ ಡ್ಯೂಟಿಗೆ ಬರ್ತಾರಂತೆ! ಧೂಳು ತಿನ್ನುತ್ತಿವೆ ಬೆಲೆ ಬಾಳುವ ಮಡಿಕಲ್ ವಸ್ತುಗಳು!

ಅರೋಪಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು

ಹೌದು, ಮಹಾನಗರದ  ಹಲವು ಕಡೆಗಳಲ್ಲಿ ಕಳ್ಳತನ ಮಾಡಿದ್ದ ಹಿನ್ನಲೆ ಬರೋಬ್ಬರಿ 11 ಪೊಲೀಸ್ ಠಾಣೆಯ ಪೊಲೀಸರು ಓರ್ವ ಅರೋಪಿಗಾಗಿ ಹುಡುಕಾಟ ನಡೆಸಿದ್ದರು. ಎಲ್ಲಾ ಕಡೆಗಳಲ್ಲೂ ಕೃತ್ಯದ ಸಿಸಿಟಿವಿ ಮತ್ತು ಇತರ ಸಿಸಿ ಟಿವಿಗಳ ಪರಿಶೀಲನೆ ಮಾಡಿದ್ದರು. ಎಷ್ಟೇ ಪ್ರಯತ್ನಿಸಿದ್ದರು. ಈ ಸಿಟಿ ರೌಂಡ್ಸ್ ಹಾಕುತ್ತಿದ್ದ ಅರೋಪಿಯನ್ನು ಹಿಡಿಯಲು ಆಗುತ್ತಿರಲಿಲ್ಲ. ಒಬ್ಬರೆ ಮೆಡಿಕಲ್​ನಲ್ಲಿ ಇರುವುದು ಗಮನಿಸಿ ಹೋಗುತಿದ್ದ ಈ ಆಸಾಮಿ, ಇದೀಗ ವಿದ್ಯಾರಣ್ಯ ಪೊಲೀಸರು ಬಂಧಿಸಿದ್ದು, ಸದ್ಯ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?