Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಸೀಟ್ ಕೊಡಿಸುವ ಆಮಿಷವೊಡ್ಡಿ ಬೆಂಗಳೂರಿನಲ್ಲಿ ಮೈಸೂರು ವಿದ್ಯಾರ್ಥಿಗೆ ವಂಚನೆ

ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣ ಬೆಂಗಳೂರಿನಲ್ಲಿ ಮತ್ತೆ ಬೆಳಕಿಗೆ ಬಂದಿದೆ. ದಾವಣಗೆರೆಯಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಮೈಸೂರು ವಿದ್ಯಾರ್ಥಿ ಮತ್ತು ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿ 10 ಲಕ್ಷ ರೂಪಾಯಿ ಪಡೆದಿದ್ದಾರೆ. ನಂತರ ಸೀಟ್​ಗಾಗಿ ದೂರವಾಣಿ ಕರೆ ಮಾಡಿದಾಗ ವಂಚಕರು ಸಂಪರ್ಕಕ್ಕೆ ಸಿಗದೆ ಪರಾರಿಯಾಗಿದ್ದಾರೆ.

ಮೆಡಿಕಲ್ ಸೀಟ್ ಕೊಡಿಸುವ ಆಮಿಷವೊಡ್ಡಿ ಬೆಂಗಳೂರಿನಲ್ಲಿ ಮೈಸೂರು ವಿದ್ಯಾರ್ಥಿಗೆ ವಂಚನೆ
ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವ ಆಮಿಷವೊಡ್ಡಿ ಮೈಸೂರು ವಿದ್ಯಾರ್ಥಿಗೆ ವಂಚನೆ (ಸಾಂದರ್ಭಿಕ ಚಿತ್ರ)Image Credit source: HT FILE
Follow us
TV9 Web
| Updated By: Rakesh Nayak Manchi

Updated on:Oct 06, 2023 | 10:20 AM

ಬೆಂಗಳೂರು, ಅ.6: ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣ ಬೆಂಗಳೂರಿನಲ್ಲಿ (Bangalore) ಮತ್ತೆ ಬೆಳಕಿಗೆ ಬಂದಿದೆ. ದಾವಣಗೆರೆಯಲ್ಲಿ ಮೆಡಿಕಲ್ ಸೀಟ್ (Medical Seat) ಕೊಡಿಸುವುದಾಗಿ ಮೈಸೂರು ವಿದ್ಯಾರ್ಥಿ ಮತ್ತು ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿ 10 ಲಕ್ಷ ರೂಪಾಯಿ ಪಡೆದ ಬಳಿಕ ಸಂಪರ್ಕಕ್ಕೆ ಸಿಗದೆ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೆಡಿಕಲ್ ಓದಬೇಕು ಎಂಬ ಕನಸು ಇಟ್ಟುಕೊಂಡಿದ್ದ ಮೈಸೂರಿನ ವಿದ್ಯಾರ್ಥಿಯೊಬ್ಬ ಮೆಡಿಕಲ್ ಸೀಟ್​ಗಾಗಿ ತಯಾರಿ ನಡೆಸುತ್ತಿದ್ದನು. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಬರದಿದ್ದ ಹಿನ್ನೆಲೆ ಮತ್ತೊಮ್ಮೆ ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದನು.

ಇದೇ ವೇಳೆ ವಿದ್ಯಾರ್ಥಿಯ ಅಣ್ಣನ ಮೊಬೈಲ್​ಗೆ ಅನಾಮಿಕ ಸಂದೇಶವೊಂದು ಬಂದಿದೆ. ಇದಾದ ಕೆಲ ಹೊತ್ತಲ್ಲೇ ದೂರವಾಣಿ ಕರೆ ಮಾಡಿದ ಅಪರಿಚಿತರು, ನಾಲ್ಕೈದು ವರ್ಷಗಳಿಂದ ಮೆಡಿಕಲ್ ಸೀಟ್ ಕೊಡಿಸುತ್ತಿದ್ದೇವೆ‌. ನಿಮ್ಮ ಮಗನಿಗೆ ದಾವಣಗೆರೆಯಲ್ಲಿ ಸೀಟ್ ಕೊಡಿಸುತ್ತೇವೆ ಎಂದು ಬೆಂಗಳೂರಿಗೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: 854 ಕೋಟಿ ರೂ. ವಂಚನೆ ಪ್ರಕರಣ ಭೇದಿಸಿದ ಸಿಸಿಬಿ: ಆರೋಪಿಗಳು ಜನರಿಗೆ ವಂಚಿಸಿದ್ದು ಹೇಗೆ? ಇಲ್ಲಿದೆ ಸೈಬರ್​ ಕಹಾನಿ

ಅದರಂತೆ ಅಪರಿಚಿತರು ಸೂಚಿಸಿದಂತೆ ವಿದ್ಯಾರ್ಥಿ ಮತ್ತು ಪೋಷಕರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯ ಕಚೇರಿಯೊಂದಕ್ಕೆ ಹೋಗಿದ್ದಾರೆ. ಈ ವೇಳೆ ಖಾಸಗಿ ಕಾಲೇಜಿನ ಕಾರ್ಯದರ್ಶಿ ಎಂದು ಓರ್ವ ವ್ಯಕ್ತಿ ಪರಿಚಯ ಮಾಡಿಕೊಂಡಿದ್ದು, ಸರ್ಕಾರಿ ಕೋಟಾದಲ್ಲೇ ಸೀಟ್ ಸಿಗುತ್ತೆ ಅಂತಾ ಮೂರು ಲಕ್ಷ ಅಡ್ವಾನ್ಸ್ ಕೇಳಿದ್ದಾನೆ.

ನಂತರ, ಬಾಸ್ ಅಂತಾ ಮತ್ತೊಬ್ಬ ವ್ಯಕ್ತಿಯ ಪರಿಚಯ ಮಾಡಿಸಲಾಗಿದೆ. ಅವರಿಗೆ ಹತ್ತು ಲಕ್ಷ ನೀಡದರೆ ಸೀಟ್ ಸಿಗುವುದು ನಿಶ್ಚಿತವಾಗುತ್ತದೆ ಎಂದು ನಂಬಿಸಲಾಗಿದೆ. ಮಾತುಕತೆ ಬಳಿಕ ಅಪರಿಚಿತ ಗ್ಯಾಂಗ್ ಸೀಟ್ ಕಾಯ್ದಿರಿಸುವ ಹೆಸರಲ್ಲಿ 10.80 ಲಕ್ಷ ವಸೂಲಿ ಮಾಡಿದೆ.

ಹಣ ನೀಡಿದ ನಂತರ ವಿದ್ಯಾರ್ಥಿ ಪೋಷಕರು ಸೀಟ್​ಗಾಗಿ ಪೋನ್ ಮಾಡಿದ್ದಾರೆ. ಈ ವೇಳೆ ಪೋನ್ ಸ್ವೀಕರಿಸದೆ ಸೈಲೆಂಟ್ ಆಗಿದ್ದ ಅಪರಿಚಿತರು ಕನ್ನಿಂಗ್ ಹ್ಯಾಮ್ ಕಚೇರಿಯಲ್ಲೂ ಕಾಣಿಸಿಕೊಳ್ಳದೆ ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಐವರ ಗ್ಯಾಂಗ್ ವಿರುದ್ಧ ವಿದ್ಯಾರ್ಥಿ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಐವರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 6 October 23

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್