AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!

ಜಾಮೀನಿಗಾಗಿ ನಿವೃತ್ತ ಎಎಸ್​​​ಐ ಅಧಿಕಾರಿ ಮತ್ತು ರೈತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ನ್ಯಾಯಾಲಯ ಆರೋಪಿಗಳ ಜಾಮೀನನ್ನು ವಜಾಗೊಳಿಸಿದೆ.

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jul 05, 2024 | 8:43 AM

Share

ಬೆಂಗಳೂರು, ಜುಲೈ 05: ಜಾಮೀನು ಪಡೆಯುವ ವೇಳೆ ನಕಲಿ ಶ್ಯೂರಿಟಿ (Fake Documents) ಸಲ್ಲಿಸಿ ನ್ಯಾಯಾಲಯಕ್ಕೆ (Court) ಮೋಸ ಮಾಡಿರುವುದು ದಾಖಲೆ ಪರಿಶೀಲನೆ ವೇಳೆ ತಿಳಿದ್ದಿದ್ದು, ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ (CCB) ಎಫ್​ಐಆರ್​ ದಾಖಲಾಗಿದೆ. 2021ರಲ್ಲಿ ಕಾಡುಗೋಡಿ ಪೊಲೀಸರು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ ಆದಿತ್ಯಮ್ ಎಂಬುವುನನ್ನು ಬಂಧಿಸಿದ್ದರು. ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆರೋಪಿ ಆದಿತ್ಯಮ್​ ಕಡೆಯವರು ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ ಮೂಲದ ಓರ್ವ ರೈತರ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಜಮೀನು ದಾಖಲೆಗಳನ್ನು ಸೃಷ್ಟಿಸಿದ್ದರು. ನಕಲಿ ದಾಖಲೆಗಳಲ್ಲದೆ ಈತನೇ ಜಮೀನು ಮಾಲಿಕ ಅಂತ ನಕಲಿ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವಿಚಾರ ತಿಳಿದ ಚಿಕ್ಕಬಳ್ಳಾಪುರ‌ ಮೂಲದ ರೈತ ಸಿಸಿಬಿಗೆ ದೂರು ನೀಡಿದ್ದರು. ಪೊಲೀಸರ ತಪಾಸಣೆ ವೇಳೆ ದಾಖಲೆ ಪತ್ರಗಳು ನಕಲಿ ಎಂದು ತಿಳಿದು ಬಂತು. ಸದ್ಯ ಸಿಸಿಬಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ವಿವಾಹ ಕಾಯ್ದೆಯಡಿ ಹಿಂದೂ-ಮುಸ್ಲಿಂ ವಿವಾಹ ಮುಸ್ಲಿಂ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ನ್ಯಾಯಾಲಯ

ಇದೇ ರೀತಿ ನಿವೃತ ಎಎಸ್​ಐ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಲಾಗಿತ್ತು. ಸಿದ್ದಾಪುರ ಪೊಲೀಸರು ಫೋಕ್ಸೋ ಪ್ರಕರಣದಲ್ಲಿ ನವೀದ್ ಪಾಷ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಕಡೆಯವರು ಜಾಮೀನು ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು. ನಿವೃತ್ತ ಎಎಸ್​ಐ ಅಧಿಕಾರಿ ಹೆಸರಿನ ನಕಲಿ ಆಧಾರ್ ಕಾರ್ಡ್, ಜಮೀನು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದರು. ಪೊಲೀಸ ತಪಾಸಣೆ ನಡೆಸಿದಾಗ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬಯಲಾಗದೆ.

ನಕಲಿ ದಾಖಲೆ ಸಲ್ಲಿಸಿದ್ದವರ ವಿರುದ್ಧ ಕ್ರಮಕ್ಕೆ ನಿವೃತ್ತ ಎಎಸ್​ಐ ನ್ಯಾಯಾಲಯದ ಮೊರೆಹೋಗಿದ್ದಾರೆ. ಸದ್ಯ ಆರೋಪಿ ನವೀನ್ ಪಾಷಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ. ನಕಲಿ ದಾಖಲೆ ಸೃಷ್ಟಿ ಹಿಂದೆ ದೊಡ್ಡ ಜಾಲವೇ ಇರುವುದು ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು