AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!

ಜಾಮೀನಿಗಾಗಿ ನಿವೃತ್ತ ಎಎಸ್​​​ಐ ಅಧಿಕಾರಿ ಮತ್ತು ರೈತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ನ್ಯಾಯಾಲಯ ಆರೋಪಿಗಳ ಜಾಮೀನನ್ನು ವಜಾಗೊಳಿಸಿದೆ.

ಬೆಂಗಳೂರು: ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಕೆ!
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jul 05, 2024 | 8:43 AM

Share

ಬೆಂಗಳೂರು, ಜುಲೈ 05: ಜಾಮೀನು ಪಡೆಯುವ ವೇಳೆ ನಕಲಿ ಶ್ಯೂರಿಟಿ (Fake Documents) ಸಲ್ಲಿಸಿ ನ್ಯಾಯಾಲಯಕ್ಕೆ (Court) ಮೋಸ ಮಾಡಿರುವುದು ದಾಖಲೆ ಪರಿಶೀಲನೆ ವೇಳೆ ತಿಳಿದ್ದಿದ್ದು, ಆರೋಪಿಗಳ ವಿರುದ್ಧ ಸಿಸಿಬಿಯಲ್ಲಿ (CCB) ಎಫ್​ಐಆರ್​ ದಾಖಲಾಗಿದೆ. 2021ರಲ್ಲಿ ಕಾಡುಗೋಡಿ ಪೊಲೀಸರು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ ಆದಿತ್ಯಮ್ ಎಂಬುವುನನ್ನು ಬಂಧಿಸಿದ್ದರು. ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆರೋಪಿ ಆದಿತ್ಯಮ್​ ಕಡೆಯವರು ಜಾಮೀನಿಗಾಗಿ ನ್ಯಾಯಾಲಯಕ್ಕೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು.

ಚಿಕ್ಕಬಳ್ಳಾಪುರ ಮೂಲದ ಓರ್ವ ರೈತರ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಜಮೀನು ದಾಖಲೆಗಳನ್ನು ಸೃಷ್ಟಿಸಿದ್ದರು. ನಕಲಿ ದಾಖಲೆಗಳಲ್ಲದೆ ಈತನೇ ಜಮೀನು ಮಾಲಿಕ ಅಂತ ನಕಲಿ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವಿಚಾರ ತಿಳಿದ ಚಿಕ್ಕಬಳ್ಳಾಪುರ‌ ಮೂಲದ ರೈತ ಸಿಸಿಬಿಗೆ ದೂರು ನೀಡಿದ್ದರು. ಪೊಲೀಸರ ತಪಾಸಣೆ ವೇಳೆ ದಾಖಲೆ ಪತ್ರಗಳು ನಕಲಿ ಎಂದು ತಿಳಿದು ಬಂತು. ಸದ್ಯ ಸಿಸಿಬಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಿಶೇಷ ವಿವಾಹ ಕಾಯ್ದೆಯಡಿ ಹಿಂದೂ-ಮುಸ್ಲಿಂ ವಿವಾಹ ಮುಸ್ಲಿಂ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ನ್ಯಾಯಾಲಯ

ಇದೇ ರೀತಿ ನಿವೃತ ಎಎಸ್​ಐ ಅಧಿಕಾರಿಯ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಲಾಗಿತ್ತು. ಸಿದ್ದಾಪುರ ಪೊಲೀಸರು ಫೋಕ್ಸೋ ಪ್ರಕರಣದಲ್ಲಿ ನವೀದ್ ಪಾಷ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಕಡೆಯವರು ಜಾಮೀನು ವೇಳೆ ನಕಲಿ ಶ್ಯೂರಿಟಿ ಸಲ್ಲಿಸಿದ್ದರು. ನಿವೃತ್ತ ಎಎಸ್​ಐ ಅಧಿಕಾರಿ ಹೆಸರಿನ ನಕಲಿ ಆಧಾರ್ ಕಾರ್ಡ್, ಜಮೀನು ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ಶ್ಯೂರಿಟಿ ಸಲ್ಲಿಸಿದ್ದರು. ಪೊಲೀಸ ತಪಾಸಣೆ ನಡೆಸಿದಾಗ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬಯಲಾಗದೆ.

ನಕಲಿ ದಾಖಲೆ ಸಲ್ಲಿಸಿದ್ದವರ ವಿರುದ್ಧ ಕ್ರಮಕ್ಕೆ ನಿವೃತ್ತ ಎಎಸ್​ಐ ನ್ಯಾಯಾಲಯದ ಮೊರೆಹೋಗಿದ್ದಾರೆ. ಸದ್ಯ ಆರೋಪಿ ನವೀನ್ ಪಾಷಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ. ನಕಲಿ ದಾಖಲೆ ಸೃಷ್ಟಿ ಹಿಂದೆ ದೊಡ್ಡ ಜಾಲವೇ ಇರುವುದು ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್