AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಲಾಂಗ್ ತೋರಿಸಿ ಹಣ ವಸೂಲಿ; ಆರೋಪಿಗಳು ಎಸ್ಕೇಪ್

ನವೆಂಬರ್ 18ರ ಬೆಳ್ಳಂಬೆಳಗ್ಗೆ ಹಣ ವಸೂಲಿಗಿಳಿದು ಓರ್ವ ಪೊಲೀಸ್ ತಗಲಾಕ್ಕೊಂಡಿದ್ದರು. ಅಂಗಡಿ ಮಾಲೀಕರಿಂದ ಪೊಲೀಸರು ಹಣ ವಸೂಲಿ ಮಾಡಿದ್ದರು. ಆದರೆ ಯುವಕನೊಬ್ಬ ಹೊಯ್ಸಳ ಸಿಬ್ಬಂದಿಯಿಂದ ಹಣವನ್ನು ವಾಪಾಸ್ ಕೊಡಿಸುತ್ತಾನೆ.

ಬೆಂಗಳೂರಲ್ಲಿ ಲಾಂಗ್ ತೋರಿಸಿ ಹಣ ವಸೂಲಿ; ಆರೋಪಿಗಳು ಎಸ್ಕೇಪ್
ಹಣ ವಸೂಲಿ ಮಾಡಲು ಲಾಂಗ್ ಹಿಡಿದಿರುವ ಆರೋಪಿ
TV9 Web
| Edited By: |

Updated on:Nov 29, 2021 | 5:32 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲಾಂಗ್ ತೋರಿಸಿ ಪುಂಡರು ಹಣ ವಸೂಲಿ ಮಾಡಿರುವ ಘಟನೆ ನಡೆದಿದೆ. ವಸಂತನಗರದ 8ನೇ ಕ್ರಾಸ್​ನಲ್ಲಿ ನಿನ್ನೆ ಸಂಜೆ 5.30ಕ್ಕೆ ಈ ಘಟನೆ ನಡೆದಿದ್ದು, ಬೈಕ್​ನಲ್ಲಿ ಬಂದ ಆರೋಪಿಗಳು ಬೆದರಿಸಿ 25 ಸಾವಿರ ಕಿತ್ತು ಪರಾರಿಯಾಗಿದ್ದಾರೆ. ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಲಾಂಗ್ ತೋರಿಸಿ ಬೆದರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಸೂಲಿಗಿಳಿದು ತಗಲಾಕ್ಕೊಂಡ ಹೊಯ್ಸಳ ಸಿಬ್ಬಂದಿ ನವೆಂಬರ್ 18ರ ಬೆಳ್ಳಂಬೆಳಗ್ಗೆ ಹಣ ವಸೂಲಿಗಿಳಿದು ಓರ್ವ ಪೊಲೀಸ್ ತಗಲಾಕ್ಕೊಂಡಿದ್ದರು. ಅಂಗಡಿ ಮಾಲೀಕರಿಂದ ಪೊಲೀಸರು ಹಣ ವಸೂಲಿ ಮಾಡಿದ್ದರು. ಆದರೆ ಯುವಕನೊಬ್ಬ ಹೊಯ್ಸಳ ಸಿಬ್ಬಂದಿಯಿಂದ ಹಣವನ್ನು ವಾಪಾಸ್ ಕೊಡಿಸುತ್ತಾನೆ. ಅಂಗಡಿ ಮಾಲೀಕರಿಂದ ಪೊಲೀಸ್ ಹಣ ಪಡೆಯುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬೆಂಗಳೂರಿನ ಮಾರತ್ತಹಳ್ಳಿ ಫ್ಲೈಓವರ್ ಬಳಿ ಈ ಘಟನೆ ನಡೆದಿತ್ತು.

ಅಂಗಡಿ ಮಾಲೀಕರಿಂದ ಪೊಲೀಸ್ ಹಣ ವಸೂಲಿ ಮಾಡಿದ ಸ್ಥಳದಲ್ಲೇ ಯುವಕ ಪಡೆದ ಹಣವನ್ನ ವಾಪಾಸ್ ಕೊಡಿಸಿದ್ದಾನೆ. ಮಹಿಳೆ ಹೊಯ್ಸಳ ಸಿಬ್ಬಂದಿಗೆ ಹಣ ನೀಡಿದ್ದಾರೆ. ಹಣ ನೀಡಿ ವಾಪಾಸ್ ಹೋಗುತ್ತಿದ್ದಂತೆ ಪೊಲೀಸ್ ಬಳಿ ಯುವಕ ಹೋಗಿ ಸರ್ ಸರ್ ಎಂದು ಕರೆದು ಏನ್ ತೆಗೆದುಕೊಂಡಿದ್ದೀರಿ ಅಂತ ಕೇಳಿದ್ದಾನೆ. ನಂತರ ತೆಗೆದುಕೊಂಡ ಹಣ ವಾಪಾಸ್ ಕೊಡಿ ಅಂತ ಯುವಕ ಕೇಳಿದ್ದಾನೆ. ಯುವಕ ಹೇಳುತ್ತಿದ್ದಂತೆ ವಸೂಲಿ ಮಾಡಿದ್ದ ಹಣವನ್ನು ಪೊಲೀಸ್ ಮಹಿಳೆಗೆ ವಾಪಾಸ್ ನೀಡಿ ಹೊರಟು ಹೋಗಿದ್ದಾರೆ.

ಕಂಪನಿಗೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್ ಇನ್ಶೂರೆನ್ಸ್, ರಿಯಲ್ ಎಸ್ಟೇಟ್ ಫೈನಾನ್ಸ್ ಕಂಪನಿಗೆ ಗ್ರಾಹಕರ ಲೀಡ್ಸ್ ನೀಡುವುದಾಗಿ ವಂಚಿಸುತ್ತಿದ್ದವನು ಅರೆಸ್ಟ್ ಆಗಿದ್ದಾನೆ. ಸಿಸಿಬಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ನಿಶ್ಚಿತ್ ಸಿಎಸ್​​ ಬಂಧಿತ ಆರೋಪಿ. ಈತ ಇನ್ಶೂರೆನ್ಸ್, ಫೈನಾನ್ಸ್ ಕಂಪನಿಗಳನ್ನ ಸಂಪರ್ಕಿಸುತ್ತಿದ್ದ. ಇ-ಮೇಲ್​ ಮೂಲಕ ಕಂಪನಿಗಳನ್ನ ಸಂಪರ್ಕಿಸುತ್ತಿದ್ದ. ಇನ್ಫೋಸಿಸ್ ಕಂಪನಿ ಹೆಚ್​​ಆರ್ ಹೆಸರಿನಲ್ಲಿ ​ ಗ್ರಾಹಕರ ಲೀಡ್ಸ್ ಕೊಡುವುದಾಗಿ ಆಫರ್ ನೀಡುತ್ತಿದ್ದ. ಬಳಿಕ ಹಂತ ಹಂತವಾಗಿ ಹಣ ಪಡೆದು ವಂಚಿಸುತ್ತಿದ್ದ. ಆರೋಪಿಯ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ

ಮಹಿಳಾ ಸಂಸದರೊಂದಿಗೆ ಸೆಲ್ಫಿ; ಲೋಕಸಭೆ ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಹೇಳಿದವರಾರು ಎಂದ ಶಶಿ ತರೂರ್ ಟ್ವೀಟ್‌ಗೆ ಆಕ್ಷೇಪ

‘ಕೌನ್​ ಬನೇಗಾ ಕರೋಡ್​ಪತಿ’ 1000ನೇ ಎಪಿಸೋಡ್​; ಮಗಳ ಎದುರು ಕಣ್ಣೀರು ಹಾಕಿದ ಅಮಿತಾಭ್​ ಬಚ್ಚನ್​

Published On - 5:20 pm, Mon, 29 November 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು