AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಾಸಕ ರಿಜ್ವಾನ್ ಅರ್ಷದ್ ಬೆಂಬಲಿಗರಿಂದ ಗೂಂಡಾಗಿರಿ ಆರೋಪ; ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪೊಲೀಸರು

ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್​​ ಅರ್ಷದ್​ ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು: ಶಾಸಕ ರಿಜ್ವಾನ್ ಅರ್ಷದ್ ಬೆಂಬಲಿಗರಿಂದ ಗೂಂಡಾಗಿರಿ ಆರೋಪ; ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪೊಲೀಸರು
ಸೋನಂ ಮಿಶ್ರಾ ಮನೆಗೆ ಬೀಗ ಹಾಕಿರುವುದು
TV9 Web
| Edited By: ವಿವೇಕ ಬಿರಾದಾರ|

Updated on:Dec 20, 2022 | 4:59 PM

Share

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ (Shivajinagar) ಕ್ಷೇತ್ರದ ಶಾಸಕ ರಿಜ್ವಾನ್​​ ಅರ್ಷದ್​ (Rizwan Arshad) ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಆರೋಪ ಕೇಳಿಬಂದಿದೆ. ರಿಜ್ವಾನ್​​ ಅರ್ಷದ್ ಬೆಂಬಲಿಗರು ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ, ರಿಚರ್ಡ್ಸ್ ಪಾರ್ಕ್ ಬಳಿಯ ಹರ್ಮನ್​ ರಿಗಾಲಿಯಾ ಅಪಾರ್ಟ್​ಮೆಂಟ್​​ನಲ್ಲಿ ನಲೆಸಿರುವ ದೆಹಲಿ ಮೂಲದ ಸೋನಂ ಮಿಶ್ರಾ ಎಂಬ ಮಹಿಳೆಯ ಮನೆಗೆ ರಾತ್ರೋರಾತ್ರಿ ನುಗ್ಗಿದ್ದಾರೆ. ನಂತರ ಮಹಿಳೆ ಮೇಲೆ ದೌರ್ಜನ್ಯವೆಸಗಿ ಮನೆಯಲ್ಲಿನ ಚಿನ್ನಾಭರಣ, ಹಣ, ದೋಚಿ ನಂತರ ಮನೆಗೆ ಬೀಗ ಹಾಕಿ ಸೋನಂ ಮಿಶ್ರಾರನ್ನು ಹೊರಹಾಕಿರುವ ಆರೋಪ ಕೇಳಿಬಂದಿದೆ.

ಇನ್ನೂ ಪುಲಿಕೇಶಿನಗರ ಪೊಲೀಸ್​ ಠಾಣೆ ಪೊಲೀಸರು ಘಟನೆ ಕುರಿತು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಸೋನಂ ಆರೋಪಿಸಿದ್ದಾರೆ.

ಇಬ್ಬರು ಪುರುಷರು, ಮೂರು ಜನ ಮಹಿಳೆಯರು ಮನೆಯೊಳಗೆ ಇದ್ದಾರೆ

ಇಬ್ಬರು ಪುರುಷರು, ಮೂರು ಜನ ಮಹಿಳೆಯರು ಮನೆಯೊಳಗೆ ಇದ್ದಾರೆ. ಒಳಗಡೆಯಿಂದ ಬಾಗಿಲಿನ ಗ್ರಿಲ್​ ಲಾಕ್ ಮಾಡಿದ್ದಾರೆ. ಅಕ್ರಮವಾಗಿ ಮನೆಯಲ್ಲಿ ನಿನ್ನೆ ರಾತ್ರಿಯಿಂದ ಇದ್ದಾರೆ. ಪೊಲೀಸರು ಕರೆದರು ಅವರು ಹೊರ ಬರುತ್ತಿಲ್ಲ. ಒಂದು ವರ್ಷದ ಹಿಂದೆಯೂ ಇದೇ ತರಹ ಆಗಿತ್ತು. ರಿಜ್ವಾನ್ ಅರ್ಷಾದ್ ಕಡೆಯವರೇ ಇದನ್ನು ಮಾಡುತ್ತಿದ್ದಾರೆ. ರಹಮಾನ್, ಬಷೀರ್, ಮಜರ್ ಅನ್ನುವಂತರೇ ಇದರಲ್ಲಿ ಇದ್ದಾರೆ. ಹೆದರಿಸಿ ,ಬೆದರಿಸಿ ನಮನ್ನು ಮನೆ ಖಾಲಿ ಮಾಡಿಸಲು ನೋಡುತ್ತಿದ್ದಾರೆ ಎಂದು ಸೋನಮ್ ಮಿಶ್ರಾ ಗಂಡ‌ ಶಹಬಾಸ್  ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 20 December 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ