AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ನಾಯಿಮರಿಗಳ ಸಾವಿಗೆ ಕಾರಣ ಆರೋಪ: ದಂಡ ಹೆಚ್ಚಳಕ್ಕೆ ಹೈಕೋರ್ಟ್ ನಕಾರ

ಆರು ನಾಯಿಮರಿಗಳ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣ ಒಂದರಲ್ಲಿ 72 ವರ್ಷದ ವೃದ್ಧೆಗೆ 47 ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ವಿಧಿಸಿದ್ದ ದಂಡ ಮೊತ್ತವನ್ನು ಹೆಚ್ಚಿಸುವಂತೆ ಕೋರಲಾಗಿದ್ದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

6 ನಾಯಿಮರಿಗಳ ಸಾವಿಗೆ ಕಾರಣ ಆರೋಪ: ದಂಡ ಹೆಚ್ಚಳಕ್ಕೆ ಹೈಕೋರ್ಟ್ ನಕಾರ
ಹೈಕೋರ್ಟ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Jan 17, 2024 | 10:03 PM

ಬೆಂಗಳೂರು, ಜನವರಿ 17: ಆರು ನಾಯಿಮರಿಗಳ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾದ ಪ್ರಕರಣ ಒಂದರಲ್ಲಿ 72 ವರ್ಷದ ವೃದ್ಧೆಗೆ 47 ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ವಿಧಿಸಿದ್ದ ದಂಡ ಮೊತ್ತವನ್ನು ಹೆಚ್ಚಿಸುವಂತೆ ಕೋರಲಾಗಿದ್ದ ಮನವಿಯನ್ನು ಹೈಕೋರ್ಟ್ (High Court) ವಜಾಗೊಳಿಸಿದೆ. ಮಹಿಳೆಯ ಮನೆ ಮುಂದೆ ಬೀದಿನಾಯಿ 8 ಮರಿ ಹಾಕಿತ್ತು. ನಾಯಿಗಳ ಶಬ್ದ ಸಹಿಸದೇ ಮಹಿಳೆ ಮರಿಗಳನ್ನು ಬೇರೆಡೆ ಬಿಟ್ಟಿದ್ದರು. ತಾಯಿಯಿಂದ ದೂರವಾದ ನಾಯಿಮರಿಗಳು ಆಹಾರವಿಲ್ಲದೇ ಮೃತಪಟ್ಟಿದ್ದವು.

ಈ ಹಿನ್ನೆಲೆಯಲ್ಲಿ ಪೊನ್ನಮ್ಮ ವಿರುದ್ಧ ಪ್ರಾಣಿ ಕಲ್ಯಾಣ ಅಧಿಕಾರಿ ಹೆಚ್.ಬಿ.ಹರೀಶ್ ಕೇಸ್ ದಾಖಲಿಸಿದ್ದರು. ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಕೋರ್ಟ್​ನಲ್ಲಿ ತಪ್ಪೊಪ್ಪಿಕೊಂಡ ಮಹಿಳೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ 1 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿತ್ತು. ಶಿಕ್ಷೆ ಹೆಚ್ಚಳ ಕೋರಿ ದೂರುದಾರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗೆ ದಂಡ ಹೆಚ್ಚಳಕ್ಕೆ ನ್ಯಾಯಮೂರ್ತಿ ಜೆ.ಎಂ.ಖಾಜಿ ನಕಾರವೆತ್ತಿದ್ದಾರೆ.

ನಗರದಲ್ಲಿ ಮಂದುವರೆದ ಬಿದಿ ನಾಯಿಗಳ ಹಾವಳಿ 

ಕಲಬುರಗಿ: ನಗರದಲ್ಲಿ ಬಿದಿ ನಾಯಿಗಳ ಹಾವಳಿ ಮಂದುವರೆದಿದ್ದು, ಒಂದು ವಾರ ಕಳೆಯುವಷ್ಟರಲ್ಲಿ ಮತ್ತೊಂದು ಮಗುವಿನ ಮೇಲೆ ಬೀದಿ ನಾಯಿಗಳು ಮಾರಾಣಾಂತಿಕ ದಾಳಿ ಮಾಡಿರುವಂತಹ ಘಟನೆ ಇತ್ತೀಚಿಗೆ ತವಡವಾಗಿ ಬೆಳಕಿಗೆ ಬಂದಿತ್ತು. ಕಳೆದ ಮೂರು ದಿನಗಳ ಹಿಂದೆ ಕಲಬುರಗಿಯ ಮಿಸ್ಬಾ ನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ದಾಳಿ ಮಾಡಿತ್ತು. ಹಾಲು ತರಲು ಅಂಗಡಿಗೆ ಹೋಗಿದ್ದ ರಶೀದ್ ಅಶ್ಫಕ್ (5) ಎಂಬ ಕಂದಮ್ಮನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು.

ಇದನ್ನೂ ಓದಿ: ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಕಂದಮ್ಮ ಸ್ಥಳೀಯರ ಸಹಾಯದಿಂದ ಬಚಾವ್ ಆಗಿತ್ತು. ಸದ್ಯ ಮತ್ತೊಮ್ಮೆ ಸ್ಥಳೀಯರು ಬಿದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕದ ಕಲಬುರಗಿ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಯಾಕೆಂದರೆ ಕಳೆದವಾರ ಇದೇ ಏರಿಯಾದಲ್ಲಿ ಆರು ವರ್ಷದ ಬಾಲಕಿ ಮೇಲೆ ಮಾರಣಾಂತಿಕ ದಾಳಿ ಮಾಡಿದ್ದವು.

ಇದನ್ನೂ ಓದಿ: ರಾಯಚೂರು: ತಾಯಿ, ಮಗನ ಮೇಲೆ ಬೀದಿ ನಾಯಿ ದಾಳಿ; ಭಯ ಹುಟ್ಟಿಸುತ್ತೆ ಸಿಸಿಟಿವಿ ದೃಶ್ಯ

ಸ್ವಲ್ಲದರಲ್ಲೆ ಅದೃಷ್ಟವಶಾತ್ ಕಂದಮ್ಮ ಬದುಕುಳಿದಿತ್ತು.‌ ಆವತ್ತು ಪಾಲಿಕೆ ಸಾಮನ್ಯ ಸಭೆಯಲ್ಲಿ ದೊಡ್ಡ ಗಲಾಟೆಯೇ ನಡೆದು ಹೋಗಿತ್ತು. ಗಲಾಟೆಯಿಂದ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕುವ ವಾಗ್ದಾನ ನೀಡಿದ್ದರು. ಆದರೂ ಒಂದು ಕಳೆಯುವಷ್ಟರಲ್ಲಿ ಮತ್ತೊಮ್ಮೆ ಅದೇ ಏರಿಯಾದಲ್ಲಿ ದಾಳಿಯಾಗಿದ್ದು, ಪಾಲಿಕೆ ಅಧಿಕಾರಿಗಳ ಕಾರ್ಯವೈಕರಿಯ‌ನ್ನ ಎತ್ತಿ ತೋರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ