AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

ಹೆಂಡತಿ ಕಾಣುತ್ತಿಲ್ಲವೆಂದು ಗಂಡ, ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು
ಕಾಣೆಯಾದ ನವೀದ್ ಮತ್ತು ಶಾಜಿಯಾ
TV9 Web
| Edited By: ವಿವೇಕ ಬಿರಾದಾರ|

Updated on:Jan 20, 2023 | 8:37 AM

Share

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Fri, 20 January 23

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!