AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

ಹೆಂಡತಿ ಕಾಣುತ್ತಿಲ್ಲವೆಂದು ಗಂಡ, ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು
ಕಾಣೆಯಾದ ನವೀದ್ ಮತ್ತು ಶಾಜಿಯಾ
TV9 Web
| Edited By: ವಿವೇಕ ಬಿರಾದಾರ|

Updated on:Jan 20, 2023 | 8:37 AM

Share

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Fri, 20 January 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ