AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

ಹೆಂಡತಿ ಕಾಣುತ್ತಿಲ್ಲವೆಂದು ಗಂಡ, ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ.

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು
ಕಾಣೆಯಾದ ನವೀದ್ ಮತ್ತು ಶಾಜಿಯಾ
TV9 Web
| Edited By: ವಿವೇಕ ಬಿರಾದಾರ|

Updated on:Jan 20, 2023 | 8:37 AM

Share

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ದಾರುಣ ಘಟನೆ: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Fri, 20 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ