Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚೀಫ್ ಇಂಜಿನಿಯರ್ ಅಂತ ಹೇಳ್ಕೊಂಡು ಹಲವರಿಗೆ ವಂಚನೆ: ಸಿಎಂ ಕಚೇರಿಗೂ ನುಗ್ಗಿದ್ದ ಆರೋಪಿ ಅರೆಸ್ಟ್​​

ಬಿಬಿಎಂಪಿ ಚೀಫ್ ಇಂಜಿನಿಯರ್ ಅಂದ್ಕೊಂಡೇ ಸಾಕಷ್ಟು ಸರ್ಕಾರಿ ಅಧಿಕಾರಿಗಳಿಗೆ ಆರೋಪಿ ಮೋಸ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ, ಯುವತಿಯರನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ.

ಬಿಬಿಎಂಪಿ ಚೀಫ್ ಇಂಜಿನಿಯರ್ ಅಂತ ಹೇಳ್ಕೊಂಡು ಹಲವರಿಗೆ ವಂಚನೆ: ಸಿಎಂ ಕಚೇರಿಗೂ ನುಗ್ಗಿದ್ದ ಆರೋಪಿ ಅರೆಸ್ಟ್​​
ಬೀದರ್ ಮೂಲದ ಪರಮೇಶ್ ಬಂಧಿತ ವ್ಯಕ್ತಿ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 20, 2022 | 1:00 PM

ಬೆಂಗಳೂರು: ಬಿಬಿಎಂಪಿ ಚೀಫ್ ಇಂಜಿನಿಯರ್ (BBMP Chief Engineer) ಅಂತ ಹೇಳ್ಕೊಂಡು ಓಡಾಡುತ್ತಿದ್ದ ಆಸಾಮಿಯನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ. ಬೀದರ್ ಮೂಲದ ಪರಮೇಶ್ ಬಂಧಿತ. ಇತ್ತೀಚೆಗೆ ಸಿಎಂ ಕಚೇರಿಗೆ ಏಕಾಏಕಿ ಪರಮೇಶ್ ನುಗ್ಗಿದ್ದು, ಈ ವೇಳೆ ಸೆಕ್ಯುರಿಟಿಗೆ ನೇಮಿಸಿದ್ದ ಪೊಲೀಸ್ ಸಿಬ್ಬಂದಿ ತಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ಆರೋಪಿ ಪರಮೇಶ್ ತಾನು ಬಿಬಿಎಂಪಿ ಚೀಫ್ ಇಂಜಿನಿಯರ್ ಎಂದಿದ್ದ. ಸಿಎಂ ಆಪ್ತ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಒಳಗೆ ಕರೆದಿದ್ದಾರೆ, ನನ್ನನ್ನ ಸಿಎಂ ಪರ್ಸನಲ್‌ ಸೆಕ್ರೆಟರಿ ಪೋಸ್ಟ್​ಗೆ ನೇಮಿಸಲಾಗಿದೆ ಎಂದಿದ್ದ. ಅನುಮಾನಗೊಂಡು ವಿಧಾನಸೌಧ ಠಾಣೆಗೆ ಪೊಲೀಸರು ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಆರೋಪಿ ಪರಮೇಶ್​ನ ಮೊಬೈಲ್​ನಲ್ಲಿ ಸಾಕಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ; ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!

ಬಿಬಿಎಂಪಿ ಚೀಫ್ ಇಂಜಿನಿಯರ್ ಅಂದ್ಕೊಂಡೇ ಸಾಕಷ್ಟು ಸರ್ಕಾರಿ ಅಧಿಕಾರಿಗಳಿಗೆ ಆರೋಪಿ ಮೋಸ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ, ಯುವತಿಯರನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ. ರಾಜಕಾರಣಿಗಳ ಜೊತೆ ಫೋಟೋ ತೆಗೆಸಿಕೊಂಡು ವಂಚಿಸ್ತಿದ್ದ. ನನಗೆ ಎಲ್ಲಾ ರಾಜಕಾರಣಿಗಳು ಪರಿಚಯವಿದ್ದು, ನಿಮಗೆ ಟ್ರಾನ್ಪರ್ ಮಾಡಿಕೊಡ್ತೀನಿ, ಟೆಂಡರ್ ಕೊಡಿಸ್ತೀನಿ ಅಂತ ಲಕ್ಷ ಲಕ್ಷ ಸುಲಿಗೆ ಮಾಡುತ್ತಿದ್ದ. ಸದ್ಯ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆಸ್ತಿಗಾಗಿ ಸ್ವಂತ ತಾತನನ್ನೇ ಕೊಂದ ಮೊಮ್ಮಗ 

ಬೆಂಗಳೂರು: ಆಸ್ತಿಗಾಗಿ ಸ್ವಂತ ತಾತನನ್ನೇ ಕೊಲೆ ಮಾಡಿದ್ದ ಮೊಮ್ಮಗ ಸೇರಿ ಇಬ್ಬರನ್ನ ಯಲಹಂಕ ಪೊಲೀಸರು ಬಂಧಿಸಿರುವಂತಹ ಘಟನೆ ನಡೆದಿದೆ. ಜಯಂತ್ ಹಾಗೂ ಆತನ ಸ್ನೇಹಿತ ಯಾಸೀನ್ ಬಂಧಿತರು. ಆ.17ರಂದು ಯಲಹಂಕದಲ್ಲಿ ಸಿ.ಪುಟ್ಟಯ್ಯ ಎಂಬುವವರನ್ನು ಮೊಮ್ಮಗ ಜಯಂತ್ ಕೊಲೆ ಮಾಡಿದ್ದ. ತಾತ ಆಸ್ತಿ ವಿಭಾಗ ಮಾಡುತ್ತಿಲ್ಲ ಎಂದು ಕೊಪಗೊಂಡು ಆರೋಪಿ ಹತ್ಯೆಗೈದಿದ್ದಾನೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸ್ಮಾರ್ಟ್ ಕಾರ್ಡ್ ಹೆಸರಲ್ಲಿ ಜನರಿಗೆ ವಂಚನೆ: ಪ್ರತಿಷ್ಠಿತ ಕಂಪನಿ ವಿರುದ್ಧ ಗಂಭೀರ ಆರೋಪ

ಸೂಪರ್ ಗುಂಡ ರೌಡಿ ಕಾಯ್ದೆಯಡಿ ಬಂಧನ

ಬೆಂಗಳೂರು: ರೌಡಿಶೀಟರ್ ರಾಕೇಶ್ ಅಲಿಯಾಸ್ ಸೂಪರ್ ಗುಂಡನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. 2013ರಿಂದ ಸರಣಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ; ಕೊಲೆ, ಕೊಲೆಯತ್ನ, ಸುಲಿಗೆ, ಕಿಡ್ನಾಪ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:52 pm, Sat, 20 August 22

ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್