AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ಅಟ್ಯಾಕ್, ಜೊತೆಯಲ್ಲಿದ್ದವ್ರೇ ಌಸಿಡ್ ಹಾಕಲು ಸುಪಾರಿ ಕೊಟ್ಟಿದ್ರು

ಅಂದುಕೊಂಡಂತೆ ಯೋಗೇಶ್ ಮಾರ್ಚ್ 18 ರ ಮುಂಜಾನೆ ಮನೆ ಹೊರಗೆ ಮಲಗಿದ್ದ ದೇವಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ನಂದಿನಿ ಲೇಔಟ್ ಠಾಣೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.

ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ಅಟ್ಯಾಕ್, ಜೊತೆಯಲ್ಲಿದ್ದವ್ರೇ ಌಸಿಡ್ ಹಾಕಲು ಸುಪಾರಿ ಕೊಟ್ಟಿದ್ರು
ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ಅಟ್ಯಾಕ್
TV9 Web
| Edited By: |

Updated on: Mar 20, 2022 | 10:44 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆ್ಯಸಿಡ್ ಅಟ್ಯಾಕ್(Acid Attack) ಮಾಡಲಾಗಿದೆ. ಇವರೆಲ್ಲರು ಕಲಾವಿದ ಸ್ನೇಹಿತರು. ಒಟ್ಟೊಟ್ಟಿಗೆ ಡ್ರಾಮಾ ಮಾಡ್ಕೊಂಡಿದ್ದವರು. ಆದ್ರೆ ಇವರ ಮಧ್ಯೆ ನಡೆಯಬಾರದ ಘಟನೆ ನಡೆದಿದೆ. ಮುಂಜಾನೆ ಹೊತ್ತಲ್ಲಿ ಬಾಟೆಲ್ ಹಿಡಿದು ಬಂದವನು ಕೆಲಸ ಮುಗಿಸಿ ಹೊರಟಿದ್ದ. ಈ ವೇಳೆ ಜೊತೆಗಿದ್ದ ಮಹಿಳೆ ಮುಖಕ್ಕೆ ಆ್ಯಸಿಡ್ ಹಾಕಿದ್ದಾನೆ.

ಮಾರ್ಚ್ 18 ರ ಮುಂಜಾನೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಒಂದು ಕೈನಲ್ಲಿ ಮಾಫ್ ಸ್ಟಿಕ್, ಮತ್ತೊಂದು ಕೈಯಲ್ಲಿ ಬಾಟೆಲ್ ಹಿಡಿದು, ಮಂಕಿ ಕ್ಯಾಪ್ ಹಾಕ್ಕೊಂಡು ಓಡಾಡಿದ್ದ. ಹೀಗೆ ಬಂದವನ ಕೈಯಲ್ಲಿ ಇದ್ದದ್ದು ಌಸಿಡ್. ಌಸಿಡ್ ಹಿಡಿದು ಬಂದಿದ್ದ ಯೋಗೇಶ್, ರಂಗಭೂಮಿ ಕಲಾವಿದೆ ದೇವಿ ಎಂಬುವವರ ಮೇಲೆ ಆಸ್ಯಿಡ್ ಎರಚಿ ನಾಪತ್ತೆಯಾಗಿದ್ದ. ಡ್ರಾಮಾ ಆರ್ಟಿಸ್ಟ್ ಆಗಿದ್ದ ದೇವಿ ಅವರ ಪತಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳೊಂದಿಗೆ ಗಣೇಶ ಬ್ಲಾಕ್ನಲ್ಲಿ ವಾಸವಾಗಿದ್ರು. ಡ್ರಾಮಾ ಕೆಲಸ ಮಾಡೋ ವೇಳೆ ಈಕೆಗೆ ರಮೇಶ್ ಮತ್ತು ಸ್ವಾತಿ ಎಂಬ ಇಬ್ಬರು ಪರಿಚಯವಾಗಿದ್ರು. ರಮೇಶ್ ಸಿವಿಲ್ ಎಂಜಿನಿಯರ್ ಆದ್ರೂ ಆಗಾಗ ಡ್ರಾಮಾ ಕೂಡ ಮಾಡ್ತಿದ್ದ. ಹೀಗೆ ಮೂವರು ಒಟ್ಟೊಟ್ಟಿಗೆ ಸೇರಿ ಡ್ರಾಮಾ ಮಾಡ್ತಿದ್ರು.

ಹೀಗೆ ಒಟ್ಟಿಗೆ ಇದ್ದವರ ಮಧ್ಯೆ ಅದೇನಾಯ್ತೋ ಏನೋ. ಒಮ್ಮೆ ರಮೇಶ್ ಪತ್ನಿಗೆ ದೇವಿ ವಾಟ್ಸಾಪ್ ಮೆಸೇಜ್ ಮಾಡಿ ರಮೇಶ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದರಂತೆ. ಇದ್ರಿಂದ ಮನೆಯಲ್ಲಿ ಗಲಾಟೆಯಾಗಿ ರಮೇಶ್ ಪತ್ನಿ ಮನೆ ಬಿಟ್ಟು ತೆರಳಿದ್ದರು. ಅಲ್ಲದೆ ನಾಟಕ ಮಾಡೋ ಜಾಗದಲ್ಲಿ ಸ್ವಾತಿ ಬಗ್ಗೆಯೂ ದೇವಿ ಕೆಟ್ಟದಾಗಿ ಮಾತಾಡಿದ್ದರಂತೆ ಹೀಗಾಗಿ ಸಿಟ್ಟಾಗಿದ್ದ ರಮೇಶ್ ಮತ್ತು ಸ್ವಾತಿ ಯೋಗೇಶ್ಗೆ ಌಸಿಡ್ ಹಾಕಲು ಸುಪಾರಿ ಡೀಲ್ ಕೊಟ್ಟಿದ್ರಂತೆ.

ಅಂದುಕೊಂಡಂತೆ ಯೋಗೇಶ್ ಮಾರ್ಚ್ 18 ರ ಮುಂಜಾನೆ ಮನೆ ಹೊರಗೆ ಮಲಗಿದ್ದ ದೇವಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ನಂದಿನಿ ಲೇಔಟ್ ಠಾಣೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.

ವರದಿ: ರಾಚಪ್ಪಾಜಿ ನಾಯಕ್, ಟಿವಿ9, ಬೆಂಗಳೂರು

ಇದನ್ನೂ ಓದಿ: ಹೋಳಿ ಹಬ್ಬದ ವೇಳೆ ಬಣ್ಣ ಎರಚುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ; ಇಬ್ಬರು ಯುವಕರಿಗೆ ಚಾಕು ಇರಿತ

ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳ ಸರ್ಕಾರ ರಚನೆಯ ಕುರಿತು ತಮ್ಮ ನಿವಾಸದಲ್ಲಿ ಸಭೆ ಕರೆದ ಪ್ರಧಾನಿ ಮೋದಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?