AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ: ಡಿಜಿ ಐಜಿಪಿ ಅಲೋಕ್ ಮೋಹನ್

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆಗಿ ಹೋದ ಘಟನೆಗಳನ್ನು ಕೆದಕಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ.

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ: ಡಿಜಿ ಐಜಿಪಿ ಅಲೋಕ್ ಮೋಹನ್
ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್ ಮತ್ತು ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ
Rakesh Nayak Manchi
|

Updated on: May 25, 2023 | 3:38 PM

Share

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆಗಿ ಹೋದ ಘಟನೆಗಳನ್ನು ಕೆದಕಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಸಿಎನ್ ಅಶ್ವತ್ಥನಾರಾಯಣ (CN Ashwath Narayan), ಹರೀಶ್ ಪೂಂಜಾ (Harish Poonja) ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಈ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾರಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಕ್ರಮ ಆಗುತ್ತೆ. ಮುಂದೆ ಎಲ್ಲವೂ ಕೆಲಸ ಅಗುತ್ತೆ ಎಂದು ಹೇಳಿದರು.

ರೌಡಿಸಂ ಅನ್ನೊದು ಜೀರೋ ಆಗಬೇಕು: ಡಿಜಿ ಐಜಿಪಿ ಅಲೋಕ್ ಮೋಹನ್

ಇಂದು ಬೆಂಗಳೂರು ಸಿಟಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ರೌಡಿಗಳಿಗೆ ಜೀರೊ ಟಾಲರೆನ್ಸ್ ಇದೆ. ರೌಡಿಸಂ ಅನ್ನೊದು ಜೀರೋ ಆಗಬೇಕು. ಡ್ರಗ್ಸ್ ವಿರುದ್ಧ ಕ್ರಮ ಆಗಬೇಕು. ಬೆಂಗಳೂರು ಡ್ರಗ್ಸ್ ರಹಿತ ಸಿಟಿ ಆಗಬೇಕು. ಪೊಲೀಸರು ಒಳ್ಳೆಯ ರೀತಿಯಲ್ಲಿ ಸಾರ್ವಜನಿಕರ ಜೊತೆಗೆ ವರ್ತನೆ ಮಾಡಬೇಕು. ಜನ ಸ್ನೇಹಿ ಪೊಲೀಸ್ ಕೆಲಸ ಮಾಡಬೇಕು, ಸಾರ್ವಜನಿಕರ ದೂರುಗಳನ್ನು ಪಡೆದು ಪ್ರಕರಣ ದಾಖಲು ಮಾಡಬೇಕು ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಗೌರವ ಇದೆ. ಆದರೂ ಅಧಿಕಾರ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಅಶ್ವತ್ಥ ನಾರಾಯಣ

ಕ್ಲಬ್ ಹಾಗೂ ಗ್ಯಾಂಬ್ಲಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅಲೋಕ್ ಮೋಹನ್, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾನೂನು ಮತ್ತು ಸುವ್ಯವಸ್ಥೆ ಶೇಕಡಾ 100 ರಷ್ಟು ನಿಯಂತ್ರಣದಲ್ಲಿ ಇರಬೇಕು. ಸಮಾಜದಲ್ಲಿ ಯಾವ ಕಾರಣಕ್ಕೂ ಅಶಾಂತಿ ನೆಲಸಲು ಬಿಡಬಾರದು. ಟ್ರಾಫಿಕ್ ಬಗ್ಗೆ ಈಗಾಗಲೇ ಹೆಚ್ಚಿನ ಕ್ರಮ ಆಗಿದೆ, ಇನ್ನು ಮುಂದೆಯೂ ಟ್ರಾಫಿಕ್ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಚುನಾವಣೆ ನಂತರ ರೌಡಿ ಆಕ್ಟಿವಿಟ್ ಆಗುತ್ತಿದೆ ಎನ್ನುವ ವಿಚಾರದ ಬಗ್ಗೆ ಮಾತನಾಡಿದ ಪೊಲೀಸ್ ಮಹಾನಿರ್ದೇಶಕರು, ನಾವು ಅದನ್ನು ಬಿಡುವುದಿಲ್ಲ, ಅದನ್ನು ಕಂಟ್ರೋಲ್ ಮಾಡುತ್ತೆವೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ವೇಳೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು, ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್