AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಜಿಂದಾಬಾದ್ ಎಂದ ವಿದ್ಯಾರ್ಥಿಗಳ ಪರ ಪೋಸ್ಟ್ ಹಾಕಿದ ನಟ ಚೇತನ್: ಸಾರ್ವಜನಿಕರಿಂದ ಟೀಕೆ

ಪಾಕಿಸ್ತಾನ್ ಜಿಂದಾಬಾದ್ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್ ಹಾಕಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಎಂದ ವಿದ್ಯಾರ್ಥಿಗಳ ಪರ ಪೋಸ್ಟ್ ಹಾಕಿದ ನಟ ಚೇತನ್: ಸಾರ್ವಜನಿಕರಿಂದ ಟೀಕೆ
ನಟ ಚೇತನ ಕುಮಾರ್​
TV9 Web
| Edited By: ವಿವೇಕ ಬಿರಾದಾರ|

Updated on:Nov 19, 2022 | 5:02 PM

Share

ಬೆಂಗಳೂರು: ಮೈನಾ ಚಿತ್ರದ ಮೂಲಕ ಖ್ಯಾತಿಯಾದ ನಟ ಚೇತನ್ ಅಹಿಂಸಾ (Actor Chetan) ಒಂದಲ್ಲಾ ಒಂದು ಹೇಳಿಕೆ ನೀಡುವ ಮೂಲಕ ಸಾಕಷ್ಟು ವಿವಾದಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈ ಹಿಂದೆ ಕಾಂತಾರ ಚಿತ್ರದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಇದೀಗ ಮೊತ್ತೊಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗುತ್ತಿದ್ದಾರೆ. ಅದು ನಿನ್ನೆ (ನ.17) ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜಿನ ಇಂಜಿನಿಯರಿಂಗ್‌ (Engineering Students) ಮೊದಲ ವರ್ಷದ ಆರ್ಯನ್, ದಿನಕರ್‌, ರಿಯಾ ರವಿಚಂದ್ರ ಕಾಮೇಡ್ಕರ್‌ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದರು.

ಸದ್ಯ ಚೇತನ್ ಅಹಿಂಸಾ ಈ ವಿದ್ಯಾರ್ಥಿಗಳ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಹಾಕಿದ್ದಾರೆ. ಅದು “ನಿನ್ನೆ ನಡೆದ ಕಾಲೇಜು ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಂಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು – ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು”, ಎಂದು ಬರೆದುಕೊಳ್ಳುವ ಮೂಲಕ ಸಾರ್ವಜನಿಕರಿಂದ ತೀರ್ವ ಟೀಕೆಗೆ ಒಳಗಾಗುತ್ತಿದ್ದಾರೆ.

ಇನ್ನೂ ವಿದ್ಯಾರ್ಥಿಗಳ ವಿರುದ್ಧ ಮಾರತ್‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 19 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ