AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಬಗ್ಗೆ ನಟ ಜಗ್ಗೇಶ್ ಹೇಳಿದ್ದೇನು?

ಸಿಎಂ, ಸ್ನೇಹಿತರು, ಶಾಸಕರು, ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ. ಪಕ್ಷ ಹಾಗೂ ಸಂಘಟನೆಗೆ ಧನ್ಯವಾದ. ನನಗೆ ಹಿರಿಯರು ಫೋನ್ ಮಾಡಿ ದಾಖಲೆ ರೆಡಿ ಮಾಡಿಕೊಳ್ಳಲು ಹೇಳಿದರು.

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಬಗ್ಗೆ ನಟ ಜಗ್ಗೇಶ್ ಹೇಳಿದ್ದೇನು?
ನಟ ಜಗ್ಗೇಶ್
TV9 Web
| Updated By: sandhya thejappa|

Updated on:May 30, 2022 | 11:51 AM

Share

ಬೆಂಗಳೂರು: ರಾಜ್ಯಸಭಾ (Rajyasabha) ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಟ ಜಗ್ಗೇಶ್ (Actor Jaggesh) ಹೆಸರನ್ನು ನಿನ್ನೆ ಘೋಷಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್, ನನಗೆ ಯಾವ ನಿರೀಕ್ಷೆ ಇರಲಿಲ್ಲ. ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ. ಸಿಎಂ, ಸ್ನೇಹಿತರು, ಶಾಸಕರು, ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ. ಪಕ್ಷ ಹಾಗೂ ಸಂಘಟನೆಗೆ ಧನ್ಯವಾದ. ನನಗೆ ಹಿರಿಯರು ಫೋನ್ ಮಾಡಿ ದಾಖಲೆ ರೆಡಿ ಮಾಡಿಕೊಳ್ಳಲು ಹೇಳಿದರು. ಹೀಗಾಗಿ ಇದು ಸಂಪೂರ್ಣ ರಾಯರ ಆಶೀರ್ವಾದದಿಂದ ಬಂದಿದೆ. ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದರು.

ಇವತ್ತು ಇದಕ್ಕೆ ಬೇಕಾದ ದಾಖಲೆ ಸಿದ್ಧತೆ ಮಾಡಿಕೊಳ್ಳುತ್ತೇನೆ. ನನಗೆ ನನ್ನ ಹೆಂಡತಿ ಕೂಡ ಇದರಲ್ಲಿ ಬಹಳ ಸಹಾಯ ಮಾಡುತ್ತಿದ್ದಾಳೆ. ನನಗೆ ನಿರೀಕ್ಷೆ ಇಲ್ಲದಿದ್ದರಿಂದ ದಾಖಲೆ ಸಂಗ್ರಹಿಸಲು ವಿಳಂಬ ಆಗಿದೆ ಎಂದು ಜಗ್ಗೇಶ್ ತಿಳಿಸಿದರು.

ಟಿಕೆಟ್​ಗಾಗಿ ನಾನು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ ಜಗ್ಗೇಶ್, ನಾನು ಯಾವ ಹುದ್ದೆಯನ್ನೂ ಕೇಳಿಲ್ಲ. ಕಳೆದ ಬಾರಿ ಕಡೆ ಗಳಿಗೆಯಲ್ಲಿ ಯಶವಂತಪುರದಲ್ಲಿ ನಿಲ್ಲಲು ಹೇಳಿದ್ದರು. ಅವತ್ತು ನನ್ನ ಮೇಲೆ ವಿಶ್ವಾಸ ಇತ್ತು. 12 ಸಾವಿರ ಇದ್ದ ಮತಗಳನ್ನು 61 ಸಾವಿರ ಮತಕ್ಕೆ ತಂದಿದ್ದೆ. ಇದರಿಂದ ನನಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಹೀಗಾಗಿ ನನ್ನ ವೃತ್ತಿಯಲ್ಲಿ ಮುಂದುವರೆಯುತ್ತಿದ್ದೆ. ನನಗೆ ಪಕ್ಷದ ವಕ್ತಾರ ಹುದ್ದೆ ಕೊಟ್ಟಿದ್ದರು. ಸಂಪೂರ್ಣವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದೆ. ರಾಜ್ಯಸಭೆಯಲ್ಲಿ ಕನ್ನಡ ಡಿಂಡಿಮ ಬಾರಿಸುತ್ತೇನೆ ಎಂದರು.

ಇದನ್ನೂ ಓದಿ
Image
ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಚಲಾಯಿಸಿದ ದುಷ್ಕರ್ಮಿ: ನರಳಾಡಿ ಪ್ರಾಣ ಬಿಟ್ಟ ಶ್ವಾನ
Image
LIC Results: ಎಲ್​ಐಸಿಯ ಇಂದಿನ ಹಣಕಾಸು ಫಲಿತಾಂಶದಿಂದ ಏನನ್ನು ನಿರೀಕ್ಷಿಸಬಹುದು? ಹೂಡಿಕೆದಾರರು ಷೇರು ಖರೀದಿಸಬಹುದಾ?
Image
ಆಡಳಿತಕ್ಕೆ ಸರ್ಜರಿ: 11 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ, ರಜನೀಶ್ ಗೋಯೆಲ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
Image
ಮಿಲ್ಕಿ ವೇಕಿಂತ 2.5 ಪಟ್ಟು ದೊಡ್ಡದಾದ ನಕ್ಷತ್ರ ಪತ್ತೆ; ನಕ್ಷತ್ರವನ್ನು ಸೆರೆ ಹಿಡಿದ ಹಬಲ್ ಬಾಹ್ಯಾಕಾಶ ದೂರದರ್ಶಕ

ಇದನ್ನೂ ಓದಿ: IPL 2022 Award Winners: ಐಪಿಎಲ್ 2022 ಎಮರ್ಜಿಂಗ್ ಪ್ಲೇಯರ್, ಸೂಪರ್ ಸ್ಟ್ರೈಕರ್ ಯಾರು?; ಇಲ್ಲಿದೆ ಎಲ್ಲ ಪ್ರಶಸ್ತಿಯ ಸಂಪೂರ್ಣ ಮಾಹಿತಿ

45 ಮತಗಳು ಬೇಕು: ರಾಜ್ಯ ಸಭೆಯ ಅಭ್ಯರ್ಥಿ ಆಯ್ಕೆಗೆ 45 ಮತಗಳು ಬೇಕು. ಸದ್ಯ ಬಿಜೆಪಿ ಬಳಿ​ 122, ಕಾಂಗ್ರೆಸ್​ 71, ಜೆಡಿಎಸ್ ಬಳಿ​ 32 ಸೀಟ್ ಇದೆ.

Published On - 11:38 am, Mon, 30 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!