AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
TV9 Web
| Edited By: |

Updated on:Nov 02, 2022 | 4:11 PM

Share

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!