AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
TV9 Web
| Updated By: ಆಯೇಷಾ ಬಾನು|

Updated on:Nov 02, 2022 | 4:11 PM

Share

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!