AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
TV9 Web
| Edited By: |

Updated on:Nov 02, 2022 | 4:11 PM

Share

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?