AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
TV9 Web
| Edited By: |

Updated on:Nov 02, 2022 | 4:11 PM

Share

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

Follow Us
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ