ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
Follow us
| Updated By: ಆಯೇಷಾ ಬಾನು

Updated on:Nov 02, 2022 | 4:11 PM

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ