AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?

ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ.

ನಟ ಸೃಜನ್ ಲೋಕೇಶ್ ಗ್ಯಾಂಗ್​​ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಕಿರಿಕ್ ಆಯ್ತಾ? ಅರುಣ್ ಸೋಮಣ್ಣ ಹೇಳಿದ್ದೇನು?
ಅರುಣ್ ಸೋಮಣ್ಣ, ಸೃಜನ್ ಲೋಕೇಶ್
TV9 Web
| Edited By: ಆಯೇಷಾ ಬಾನು|

Updated on:Nov 02, 2022 | 4:11 PM

Share

ಬೆಂಗಳೂರು: ನಟ ಸೃಜನ್ ಲೋಕೇಶ್ ಟೀಂ(Srujan Lokesh) ಹಾಗೂ ವಸತಿ ಇಲಾಖೆ ಸಚಿವ ವಿ.ಸೋಮಣ್ಣ(V Somanna) ಪುತ್ರ ಅರುಣ್ ಸೋಮಣ್ಣ ನಡುವೆ ಗಲಾಟೆ ನಡೆದಿದೆ. ಅ.31ರಂದು ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್​ ಕ್ಲಬ್​ನಲ್ಲಿ ಸೃಜನ್ ಲೋಕೇಶ್​ ತಂಡದ ಜೊತೆ ಅರುಣ್ ಸೋಮಣ್ಣ ಗಲಾಟೆ ನಡೆದಿದೆ ಎಂಬ ಮಾಹಿತಿ ತಡವಾಗಿ ಬಹಿರಂಗವಾಗಿದೆ.

ಅಪ್ಪು ಕಪ್ ಬ್ಯಾಡ್ಮಿಂಟನ್​ ಟೂರ್ನಮೆಂಟ್​ಗೆ​ ಪ್ರಾಕ್ಟೀಸ್​ ವೇಳೆ ಜಗಳ ನಡೆದಿದೆ. ಟೂರ್ನಮೆಂಟ್​ಗೆ ಸೃಜನ್​ ಲೋಕೇಶ್​ ಟೀಂ ಪ್ರಾಕ್ಟೀಸ್ ಮಾಡಿ ನಂತರ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾಕೆ ಜೋರಾಗಿ ಕಿರುಚಾಡುತ್ತಿದ್ದೀರಾ ಎಂದು ಅರುಣ್ ಪ್ರಶ್ನಿಸಿದ್ದಾರೆ. ಈ ಸಮಯ ಅರುಣ್, ಸೃಜನ್​ ಲೋಕೇಶ್​ ಟೀಂ ನಡುವೆ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಹೊಡೆದಾಟವಾಗಿದೆ. ಆದ್ರೆ ಘಟನೆ ಬಗ್ಗೆ ಗುಂಪುಗಳು, ಕ್ಲಬ್​ ಆಡಳಿತ ಮಂಡಳಿ ದೂರು ನೀಡಿಲ್ಲ. ಗಲಾಟೆ ವೇಳೆ ನಟ ಸೃಜನ್ ಲೋಕೇಶ್​ ಕಿಂಗ್ಸ್​ ಕ್ಲಬ್​ನಲ್ಲಿ ಇರಲಿಲ್ಲ. ವಿಕಾಸ್ ಮತ್ತು ಅರುಣ್ ಸೋಮಣ್ಣ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇನ್ನು ಘಟನೆ ಸಂಬಂಧ ಟಿವಿ9ಗೆ ವಸತಿ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ನಟ ಸೃಜನ್​ ಲೋಕೇಶ್​ರನ್ನು ನೇರವಾಗಿ ನೋಡಿಯೇ ಇಲ್ಲ. ನಟ ಸೃಜನ್​ ಲೋಕೇಶ್ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ. ಜೀವನದಲ್ಲಿ ಎಂದೂ ನಟ ಸೃಜನ್​ ಲೋಕೇಶ್​ ಭೇಟಿಯಾಗಿಲ್ಲ. ಯಾವುದೇ ರಾಜಿಸಂಧಾನ ಕೂಡ ಆಗಿಲ್ಲ. ಕಿಂಗ್ಸ್​ ಕ್ಲಬ್​ನಲ್ಲಿ ನಾವು ಯಾರ ಜೊತೆಗೂ ಗಲಾಟೆ ಮಾಡಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.

Published On - 4:01 pm, Wed, 2 November 22

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?