AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ

ನಗರದ ಆರ್. ಆರ್. ನಗರದ ಗೋಪಾಲನ್ ಮಾಲ್ ಬಳಿ ಒಂದೇ‌ ಕಡೆ ನಾಲ್ಕು ನಾಯಿ ಮರಿಗಳ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ನಟಿ ಅಮೂಲ್ಯ ಪತಿ ಜಗದೀಶ್ ರಾಮ್‌ಚಂದ್ರಪ್ಪ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ
4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ
TV9 Web
| Edited By: |

Updated on: Nov 26, 2021 | 8:49 AM

Share

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಪತಿ ಜಗದೀಶ್ ಈಗಾಗಲೇ ಅನೇಕ ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಂಡಿದ್ದಾರೆ. ಸದ್ಯ ಈಗ ಪುಟ್ಟಾಣಿ ನಾಯಿ ಮರಿಗಳನ್ನು ಸಾಯಿಸಲಾಗಿದೆ ಎಂದು ನಾಯಿ ಮರಿಗಳು ಮೃತಪಟ್ಟ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಪಶುಸಂಗೋಪನೆ ಇಲಾಖೆ ಸ್ಪಂದಿಸಿದ್ದು ಸೂಕ್ತ ತನಿಖೆ ನಡೆಸುವುದಾಗಿ ಹೇಳಿದೆ.

ನಗರದ ಆರ್. ಆರ್. ನಗರದ ಗೋಪಾಲನ್ ಮಾಲ್ ಬಳಿ ಒಂದೇ‌ ಕಡೆ ನಾಲ್ಕು ನಾಯಿ ಮರಿಗಳ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ನಟಿ ಅಮೂಲ್ಯ ಪತಿ ಜಗದೀಶ್ ರಾಮ್‌ಚಂದ್ರಪ್ಪ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಮುಗ್ಧ ನಾಲ್ಕು ನಾಯಿ ಮರಿಗಳ ಕತ್ತು ಕುಯ್ದು ಸಾಯಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಫೋಟೋ ಹಾಗೂ ವಿಡಿಯೋ ಹಾಕಿ ಟ್ವಿಟ್ ಮಾಡಿದ್ದಾರೆ.

ಜಗದೀಶ್ ಟ್ವೀಟ್ಗೆ ಪಶುಸಂಗೋಪನೆ ಇಲಾಖೆ ಪ್ರತಿಕ್ರಿಯೆ ನೀಡಿದೆ. ಇದು ಕತ್ತು ಕುಯ್ದು ಸಾಯಿಸಿಲ್ಲ, ಬೀದಿ ನಾಯಿಗಳ ಗಲಾಟೆಯಲ್ಲಿ ಆಗಿರಬಹುದು ಎಂದು ಸಮಜಾಯಿಷಿ ನೀಡಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ರೀ ಟ್ವೀಟ್ ಮಾಡಿದೆ. ಆದರೆ ಒಂದೇ ಕಡೆ, ಒಂದೇ ಬಾರಿ ನಾಲ್ಕು ಮರಿಗಳ ಸಾವು ಸಂಭವಿಸಿದ್ದು. ಸಾವಿನ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಕೂಡ ಈ‌ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.

ನಿಜವಾಗ್ಲೂ ಮನುಷ್ಯತ್ವ ಇದೆಯಾ ಗೊತ್ತಿಲ್ಲ! ಇಂತಹ ಮುದ್ದಾದ 20 ದಿನದ ನಾಯಿ ಮರಿಗಳನ್ನು ಗೋಪಾಲನ್ ಮಾಲ್ ಹತ್ತಿರ ಕತ್ತು ಕುಯ್ದು ಸಾಯಿಸಿದ್ದಾರೆ. ಈ ಮರಿಗಳ ಸಾವಿಗೆ ಕಾರಣರದವರನ್ನು ಪತ್ತೆ ಹಚ್ಚಿ, ಮುಂದೆ ಈ ದುರ್ಘಟನೆಗಳು ನಡೆಯದಂತೆ ಕಠಿಣ ಕ್ರಮ ಜರುಗಿಸಬೇಕೆಂದು ಬಿಬಿಎಂಪಿ & ಪಶು ಸಂಗೋಪನಾ ಇಲಾಖೆಗೆ ಮನವಿ ಮಾಡುತ್ತೇನೆ ಎಂದು ಜಗದೀಶ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಹುಡುಗ್ರು ಪೊಮೆರೇನಿಯನ್ ನಾಯಿ ಥರ ಇದ್ರೆ ಆಗಲ್ಲ’; ನಿರ್ದೇಶಕ ಯೋಗರಾಜ್​ ಭಟ್​ ಹೀಗೆ ಹೇಳಿದ್ದೇಕೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್