AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ

ನಗರದ ಆರ್. ಆರ್. ನಗರದ ಗೋಪಾಲನ್ ಮಾಲ್ ಬಳಿ ಒಂದೇ‌ ಕಡೆ ನಾಲ್ಕು ನಾಯಿ ಮರಿಗಳ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ನಟಿ ಅಮೂಲ್ಯ ಪತಿ ಜಗದೀಶ್ ರಾಮ್‌ಚಂದ್ರಪ್ಪ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ
4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ
TV9 Web
| Edited By: |

Updated on: Nov 26, 2021 | 8:49 AM

Share

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಪತಿ ಜಗದೀಶ್ ಈಗಾಗಲೇ ಅನೇಕ ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಂಡಿದ್ದಾರೆ. ಸದ್ಯ ಈಗ ಪುಟ್ಟಾಣಿ ನಾಯಿ ಮರಿಗಳನ್ನು ಸಾಯಿಸಲಾಗಿದೆ ಎಂದು ನಾಯಿ ಮರಿಗಳು ಮೃತಪಟ್ಟ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಪಶುಸಂಗೋಪನೆ ಇಲಾಖೆ ಸ್ಪಂದಿಸಿದ್ದು ಸೂಕ್ತ ತನಿಖೆ ನಡೆಸುವುದಾಗಿ ಹೇಳಿದೆ.

ನಗರದ ಆರ್. ಆರ್. ನಗರದ ಗೋಪಾಲನ್ ಮಾಲ್ ಬಳಿ ಒಂದೇ‌ ಕಡೆ ನಾಲ್ಕು ನಾಯಿ ಮರಿಗಳ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡ ನಟಿ ಅಮೂಲ್ಯ ಪತಿ ಜಗದೀಶ್ ರಾಮ್‌ಚಂದ್ರಪ್ಪ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಮುಗ್ಧ ನಾಲ್ಕು ನಾಯಿ ಮರಿಗಳ ಕತ್ತು ಕುಯ್ದು ಸಾಯಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಫೋಟೋ ಹಾಗೂ ವಿಡಿಯೋ ಹಾಕಿ ಟ್ವಿಟ್ ಮಾಡಿದ್ದಾರೆ.

ಜಗದೀಶ್ ಟ್ವೀಟ್ಗೆ ಪಶುಸಂಗೋಪನೆ ಇಲಾಖೆ ಪ್ರತಿಕ್ರಿಯೆ ನೀಡಿದೆ. ಇದು ಕತ್ತು ಕುಯ್ದು ಸಾಯಿಸಿಲ್ಲ, ಬೀದಿ ನಾಯಿಗಳ ಗಲಾಟೆಯಲ್ಲಿ ಆಗಿರಬಹುದು ಎಂದು ಸಮಜಾಯಿಷಿ ನೀಡಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ರೀ ಟ್ವೀಟ್ ಮಾಡಿದೆ. ಆದರೆ ಒಂದೇ ಕಡೆ, ಒಂದೇ ಬಾರಿ ನಾಲ್ಕು ಮರಿಗಳ ಸಾವು ಸಂಭವಿಸಿದ್ದು. ಸಾವಿನ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಕೂಡ ಈ‌ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.

ನಿಜವಾಗ್ಲೂ ಮನುಷ್ಯತ್ವ ಇದೆಯಾ ಗೊತ್ತಿಲ್ಲ! ಇಂತಹ ಮುದ್ದಾದ 20 ದಿನದ ನಾಯಿ ಮರಿಗಳನ್ನು ಗೋಪಾಲನ್ ಮಾಲ್ ಹತ್ತಿರ ಕತ್ತು ಕುಯ್ದು ಸಾಯಿಸಿದ್ದಾರೆ. ಈ ಮರಿಗಳ ಸಾವಿಗೆ ಕಾರಣರದವರನ್ನು ಪತ್ತೆ ಹಚ್ಚಿ, ಮುಂದೆ ಈ ದುರ್ಘಟನೆಗಳು ನಡೆಯದಂತೆ ಕಠಿಣ ಕ್ರಮ ಜರುಗಿಸಬೇಕೆಂದು ಬಿಬಿಎಂಪಿ & ಪಶು ಸಂಗೋಪನಾ ಇಲಾಖೆಗೆ ಮನವಿ ಮಾಡುತ್ತೇನೆ ಎಂದು ಜಗದೀಶ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ‘ಹುಡುಗ್ರು ಪೊಮೆರೇನಿಯನ್ ನಾಯಿ ಥರ ಇದ್ರೆ ಆಗಲ್ಲ’; ನಿರ್ದೇಶಕ ಯೋಗರಾಜ್​ ಭಟ್​ ಹೀಗೆ ಹೇಳಿದ್ದೇಕೆ?

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ