AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಅಶ್ವತ್ಥ್ ನಾರಾಯಣ-ಎಂ.ಬಿ.ಪಾಟೀಲ್ ಭೇಟಿ ವಿಚಾರ; ಡಿಕೆ.ಶಿವಕುಮಾರ್‌ ಮೇಲೆ ಹರಿ ಹಾಯ್ದ ನಟಿ, ಮಾಜಿ ಸಂಸದೆ ರಮ್ಯಾ

ಪಕ್ಷವನ್ನು ಹೊರತುಪಡಿಸಿ ಅನೇಕರು ಭೇಟಿಯಾಗುತ್ತಿರುತ್ತಾರೆ. ಮದುವೆ, ಇತರೆ ಸಮಾರಂಭಗಳಿಗೆ ಭೇಟಿಯಾಗುತ್ತಿರುತ್ತಾರೆ. ಎಂ.ಬಿ.ಪಾಟೀಲ್‌ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ ಎಂದು ರಮ್ಯಾ ಟ್ವೀಟ್‌ ಮಾಡಿದ್ದಾರೆ.

ಸಚಿವ ಅಶ್ವತ್ಥ್ ನಾರಾಯಣ-ಎಂ.ಬಿ.ಪಾಟೀಲ್ ಭೇಟಿ ವಿಚಾರ; ಡಿಕೆ.ಶಿವಕುಮಾರ್‌ ಮೇಲೆ ಹರಿ ಹಾಯ್ದ ನಟಿ, ಮಾಜಿ ಸಂಸದೆ ರಮ್ಯಾ
ರಮ್ಯಾ
TV9 Web
| Edited By: |

Updated on:May 11, 2022 | 6:04 PM

Share

ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಣ(Ashwath Narayan) ಎಂ.ಬಿ.ಪಾಟೀಲ್(MB Patil) ಭೇಟಿ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಹೇಳಿಕೆ ಅಚ್ಚರಿ ತಂದಿದೆ ಎಂದು ಟ್ವೀಟ್‌ ಮಾಡಿ ಎಂ.ಬಿ.ಪಾಟೀಲ್ ಪರ ನಟಿ, ಮಾಜಿ ಸಂಸದೆ ರಮ್ಯಾ (Ramya) ಬ್ಯಾಟಿಂಗ್‌ ಮಾಡಿದ್ದಾರೆ. ಪಕ್ಷವನ್ನು ಹೊರತುಪಡಿಸಿ ಅನೇಕರು ಭೇಟಿಯಾಗುತ್ತಿರುತ್ತಾರೆ. ಮದುವೆ, ಇತರೆ ಸಮಾರಂಭಗಳಿಗೆ ಭೇಟಿಯಾಗುತ್ತಿರುತ್ತಾರೆ. ಎಂ.ಬಿ.ಪಾಟೀಲ್‌ ಒಬ್ಬ ಕಟ್ಟಾ ಕಾಂಗ್ರೆಸ್ಸಿಗ ಎಂದು ರಮ್ಯಾ ಟ್ವೀಟ್‌ ಮಾಡಿದ್ದಾರೆ.

ಇತರೆ ರಾಜಕೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಕ್ಷಣೆಗಾಗಿ ಅಶ್ವತ್ಥ್​ ನಾರಾಯಣ್​ ಎಂಬಿ ಪಾಟೀಲ್​ ಮೊರೆ ಹೋಗಿರುವ ಸಾಧ್ಯತೆ ಇದೆ ಎಂದು ತಮ್ಮ ಪಕ್ಷದ ನಾಯಕನ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆಗೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಮ್ಯಾ ಟ್ವಿಟರ್​ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಎಂಬಿ ಪಾಟೀಲ್​ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್​ರ ಹೇಳಿಕೆ ಅಚ್ಚರಿ ತಂದಿದೆ ಎಂದಿದ್ದಾರೆ. ಪಕ್ಷಾತೀತವಾಗಿ ನಾಯಕರು ಭೇಟಿಯಾಗುವುದು ಹೊಸದಲ್ಲ. ಪಕ್ಷ ಭೇದ ಮರೆತು ಅನೇಕ ನಾಯಕರು ಒಟ್ಟಿಗೆ ಸಮಾರಂಭಗಳಿಗೆ ಹೋಗುವುದು ಸಹಜ. ಬೇರೆ ಬೇರೆ ಪಕ್ಷಗಳಲ್ಲಿರುವ ನಾಯಕರು ಎರಡೂ ಕುಟುಂಬಗಳ ನಡುವೆ ಮದುವೆ ಸಂಬಂಧ ಬೆಳೆಸಿರುವ ಉದಾಹರಣೆ ಇದೆ. ಇಂತಹ ಸಂದರ್ಭದಲ್ಲಿ ಡಿಕೆ ಶಿವಕುಮಾರ್​​ ಅವರ ಹೇಳಿಕೆ ನನಗೆ ಆಶ್ವರ್ಯ ಮೂಡಿಸಿದೆ. ಎಂಬಿ ಪಾಟೀಲ್​ ಕಟ್ಟಾ ಕಾಂಗ್ರೆಸ್ಸಿಗ. ಚುನಾವಣಾ ಹೊತ್ತಲ್ಲಿ ಈ ರೀತಿ ಹೇಳಿಕೆ ಸರಿ ಇಲ್ಲ. ನಾವು ಒಟ್ಟಿಗೆ ಚುನಾವಣೆ ಎದುರಿಸಬೇಕು ಅಲ್ಲವೇ ಎನ್ನುವ ಮೂಲಕ ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷದ ನಾಯಕರೊಳಗೆ ಈ ರೀತಿ ಭಿನ್ನಾಭಿಪ್ರಾಯ ಬೇಡ ಎಂಬ ಅರ್ಥದಲ್ಲಿ ಟ್ವೀಟ್​ ಮಾಡಿ ಡಿಕೆ ಶಿವಕುಮಾರ್ ವಿರುದ್ಧ ಹರಿ ಹಾಯ್ದಿದ್ದಾರೆ.

Published On - 5:53 pm, Wed, 11 May 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ