AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಕ್ರಿಸ್​ಮಸ್​ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್​ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ.

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC
ಕೆಎಸ್ಆರ್​ಟಿಸಿ ಬಸ್​
Kiran Surya
| Edited By: |

Updated on:Dec 23, 2023 | 3:24 PM

Share

ಬೆಂಗಳೂರು, ಡಿ.23: ಕ್ರಿಸ್​ಮಸ್​ ಹಬ್ಬಕ್ಕೆ ರಜೆಯಿರುವ ಹಿನ್ನೆಲೆ ಕೆಎಸ್​ಆರ್​ಟಿಸಿ (KSRTC) ಹೆಚ್ಚುವರಿಯಾಗಿ 1000 ಬಸ್​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ  ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್​ಗಳು ಕಾರ್ಯನಿರ್ವಹಿಸಲಿವೆ. ಅದರಂತೆ ಡಿ.25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್​ಗಳು  ಕಾರ್ಯಾಚರಣೆಗೊಳ್ಳಲಿದೆ.

ವಿವಿಧ ಸ್ಥಳಗಳಿಗೆ ಬಸ್​ ವ್ಯವಸ್ಥೆ; ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು

ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದಾಗಿದೆ. ಇ-ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ಇನ್ನು ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ನೀಡಿದರೆ, ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಕೊಡುತ್ತಿದೆ ಕೆಎಸ್​ಆರ್​ಟಿಸಿ.

ಇದನ್ನೂ ಓದಿ:ಕ್ರಿಸ್‌ಮಸ್: ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್, ಟಿಕೆಟ್‌ ದರದಲ್ಲಿ ಶೇ.10 ರಷ್ಟು ಡಿಸ್ಕೌಂಟ್

ಇನ್ನು ಕೆಎಸ್​ಆರ್​ಟಿಸಿಯು ಪ್ರತಿ ಹಬ್ಬಗಳಲ್ಲೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್​ಗಳನ್ನು ಏರ್ಪಡಿಸುತ್ತದೆ. ಈ ಹಿಂದಿನ ದೀಪಾವಳಿ ಹಬ್ಬದ ಪ್ರಯುಕ್ತ ಕೂಡ KSRTC ಯಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಇದೀಗ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಜೆ ಇರುವ ಹಿನ್ನಲೆ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಹೋಗುತ್ತಾರೆ. ಇದರಿಂದ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಹಾಯ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 23 December 23

Follow Us
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್