AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಕ್ರಿಸ್​ಮಸ್​ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್​ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ.

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC
ಕೆಎಸ್ಆರ್​ಟಿಸಿ ಬಸ್​
ಕಿರಣ್​ ಸೂರ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 23, 2023 | 3:24 PM

Share

ಬೆಂಗಳೂರು, ಡಿ.23: ಕ್ರಿಸ್​ಮಸ್​ ಹಬ್ಬಕ್ಕೆ ರಜೆಯಿರುವ ಹಿನ್ನೆಲೆ ಕೆಎಸ್​ಆರ್​ಟಿಸಿ (KSRTC) ಹೆಚ್ಚುವರಿಯಾಗಿ 1000 ಬಸ್​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ  ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ ಹೆಚ್ಚುವರಿ ಬಸ್​ಗಳು ಕಾರ್ಯನಿರ್ವಹಿಸಲಿವೆ. ಅದರಂತೆ ಡಿ.25 ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್​ಗಳು  ಕಾರ್ಯಾಚರಣೆಗೊಳ್ಳಲಿದೆ.

ವಿವಿಧ ಸ್ಥಳಗಳಿಗೆ ಬಸ್​ ವ್ಯವಸ್ಥೆ; ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದು

ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ. ಪ್ರಯಾಣಿಕರು ಮೊದಲೇ ಸೀಟ್ ರಿಸರ್ವ್ ಮಾಡಬಹುದಾಗಿದೆ. ಇ-ಟಿಕೆಟ್ ಸಹ ವೆಬ್ ಸೈಟ್ ಮೂಲಕ ಪಡೆಯಬಹುದು. ಇನ್ನು ನಾಲ್ಕು ಹಾಗೂ ನಾಲ್ಕಕ್ಕಿಂತ ಹೆಚ್ಚಿನ ಟಿಕೆಟ್ ಕಾಯ್ದಿರಿಸಿದರೆ, 5 % ರಿಯಾಯಿತಿ ನೀಡಿದರೆ, ಹೋಗುವ ಹಾಗೂ ಬರುವ ಟಿಕೆಟ್ ಕಾಯ್ದಿರಿಸಿದರೆ ಬರೊಬ್ಬರಿ 10% ರಿಯಾಯಿತಿ ಕೊಡುತ್ತಿದೆ ಕೆಎಸ್​ಆರ್​ಟಿಸಿ.

ಇದನ್ನೂ ಓದಿ:ಕ್ರಿಸ್‌ಮಸ್: ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್, ಟಿಕೆಟ್‌ ದರದಲ್ಲಿ ಶೇ.10 ರಷ್ಟು ಡಿಸ್ಕೌಂಟ್

ಇನ್ನು ಕೆಎಸ್​ಆರ್​ಟಿಸಿಯು ಪ್ರತಿ ಹಬ್ಬಗಳಲ್ಲೂ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್​ಗಳನ್ನು ಏರ್ಪಡಿಸುತ್ತದೆ. ಈ ಹಿಂದಿನ ದೀಪಾವಳಿ ಹಬ್ಬದ ಪ್ರಯುಕ್ತ ಕೂಡ KSRTC ಯಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಇದೀಗ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ರಜೆ ಇರುವ ಹಿನ್ನಲೆ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಹೋಗುತ್ತಾರೆ. ಇದರಿಂದ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡುವ ಮೂಲಕ ಪ್ರಯಾಣಿಕರಿಗೆ ಸಹಾಯ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sat, 23 December 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ