AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರಿಗೆ ಬಿಗ್ ಅಲರ್ಟ್; ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡಿದ್ರೆ ಎಫ್​ಐಆರ್ ಫಿಕ್ಸ್

ಮೈಸೂರು ಬೆಂಗಳೂರು ಹೈವೇ ಸಿಸಿಟಿವಿ ಪರಿಶೀಲನೆ ಮಾಡಿದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಹೆದ್ದಾರಿಯಲ್ಲಿ ರ್‍ಯಾಶ್ ಡ್ರೈವಿಂಗ್ ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ಕಾನೂನು ಜಾರಿಗೊಳಿಸಿದ್ದಾರೆ. ಆಗಸ್ಟ್ 1 ರಿಂದ ಹೆದ್ದಾರಿಗಳಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ.

ವಾಹನ ಸವಾರರಿಗೆ ಬಿಗ್ ಅಲರ್ಟ್; ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡಿದ್ರೆ ಎಫ್​ಐಆರ್ ಫಿಕ್ಸ್
ಎಡಿಜಿಪಿ ಅಲೋಕ್ ಕುಮಾರ್
Shivaprasad B
| Edited By: |

Updated on:Jul 27, 2024 | 2:35 PM

Share

ಬೆಂಗಳೂರು, ಜುಲೈ.27: ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ (Rash Driving) ಮಾಡುವವರಿಗೆ ಬಿಸಿ ಮುಟ್ಟಿಸಲು ಬೆಂಗಳೂರು ಸಂಚಾರ ಪೊಲೀಸರು​​ (Bengaluru TRaffic Police) ಮುಂದಾಗಿದ್ದು ಸಿಸಿಟಿವಿ ಪರಿಶೀಲಿಸಿ ಕೇಸ್ ದಾಖಲಿಸಲಿದ್ದಾರೆ. ಇನ್ಮುಂದೆ ಹೆದ್ದಾರಿಗಳಲ್ಲಿ ರ್‍ಯಾಶ್​ ಡ್ರೈವಿಂಗ್ ಮಾಡಿದವರ ವಿರುದ್ಧ FIR ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಹೈವೇ ಅಂತಾ ಓವರ್ ಸ್ಪೀಡ್​ನಲ್ಲಿ ಹೋದ್ರೆ FIR ದಾಖಲಾಗೋದು ಪಕ್ಕ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರ್‍ಯಾಶ್ ಡ್ರೈವಿಂಗ್ ದಿನೇ ದಿನೇ ಹೆಚ್ಚಾಗುತ್ತಿದೆ. 130 ಕಿ.ಮೀ.ಗೂ ಅಧಿಕ ಸ್ಪೀಡ್ ನಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ಹೀಗಾಗಿ ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸಂಚಾರಿ ಪೊಲೀಸರ ಕಾರ್ಯಾಚರಣೆ; ಅಪಾಯಕಾರಿ ವೀಲಿಂಗ್ ಮಾಡ್ತಿದ್ದ 20 ಆರೋಪಿಗಳ ಬಂಧನ

ಅತಿ ವೇಗದ ಚಾಲನೆಯಿಂದ 90%ರಷ್ಟು ಅಪಘಾತ ಸಾಧ್ಯತೆ ಇರುತ್ತೆ. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗ ಚಾಲನೆ ಕೇಸ್​ಗಳು ದಾಖಲಾಗುತ್ತಿವೆ. ಹೀಗಾಗಿ ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿ ಪರಿಶೀಲನೆ ಮಾಡಿದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗಸ್ಟ್ 1 ರಿಂದ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ಸ್ಪೀಡ್​ನಲ್ಲಿ 130 ಕಿ‌.ಮೀ ವೇಗ ಮಿತಿ ದಾಟಿದ್ರೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ರಸ್ತೆ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ( ಒನ್​ವೇ), ಫುಟ್​ಬಾತ್​ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡಲು ಇತ್ತೀಚೆಗೆ ಪೊಲೀಸರಿಗೆ ಎಡಿಜಿಪಿ ಸೂಚನೆ ನೀಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:24 pm, Sat, 27 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್