AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta: ಪೊಲೀಸರು ಅತಂತ್ರ: ಎಸಿಬಿ ಕಡತಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಎಡಿಜಿಪಿ ಆದೇಶ

ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತೊಂದು ಆದೇಶ ಹೊರಡಿಸಿ, ಸೆ.12ರ ಒಳಗೆ ಕಡತ ವರ್ಗಾವಣೆ ಮಾಡಲು ಸೂಚಿಸಿದ್ದಾರೆ.

Lokayukta: ಪೊಲೀಸರು ಅತಂತ್ರ: ಎಸಿಬಿ ಕಡತಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಎಡಿಜಿಪಿ ಆದೇಶ
ಲೋಕಾಯುಕ್ತ ಮತ್ತು ಎಸಿಬಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 11, 2022 | 10:20 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಹೊಸದಾಗಿ ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureu – ACB) ರಚನೆಯನ್ನು ರದ್ದುಪಡಿಸಿ, ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಲೋಕಾಯುಕ್ತ (Karnataka Lokayukfta) ಸಂಸ್ಥೆಗೆ ಬಲ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬೆಳವಣಿಗೆಗೆ ಹೈಕೋರ್ಟ್​ ತೀರ್ಪು ಮುಖ್ಯ ಕಾರಣ. ಎಸಿಬಿ ರಚನೆ ರದ್ದುಪಡಿಸಿ, ಲೋಕಾಯುಕ್ತ ಬಲವರ್ಧನೆಗೆ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತೊಂದು ಆದೇಶ ಹೊರಡಿಸಿ, ಸೆ.12ರ ಒಳಗೆ ಕಡತ ವರ್ಗಾವಣೆ ಮಾಡಲು ಸೂಚಿಸಿದ್ದಾರೆ.

ಈ ಬೆಳವಣಿಯ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಅತಂತ್ರಗೊಂಡಿದ್ದು, ಮುಂದೇನು ಮಾಡಬೇಕು ಎನ್ನುವ ಬಗ್ಗೆ ಗೊಂದಲ ಮನೆಮಾಡಿದೆ. ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸಿಬಿ ಕಚೇರಿಗಳಲ್ಲಿ ಪ್ರಸ್ತುತ 75 ಇನ್​ಸ್ಪೆಕ್ಟರ್​ಗಳು, 45 ಡಿವೈಎಸ್‌ಪಿ, 9 ಮಂದಿ ಎಸ್‌ಪಿ ದರ್ಜೆಯ ಅಧಿಕಾರಿಗಳಿದ್ದಾರೆ. ಇಷ್ಟು ಅಧಿಕಾರಿಗಳಿಗೆ ಸ್ಥಳ ತೋರಿಸುವುದೇ ಗೃಹ ಇಲಾಖೆಗೆ ಕಷ್ಟವಾಗಿದೆ.

ಲೋಕಾಯುಕ್ತ ಸಂಸ್ಥೆಯಲ್ಲಿರುವ ಇನ್​ಸ್ಪೆಕ್ಟರ್, ಡಿವೈಎಸ್‌ಪಿ ಹುದ್ದೆಗಳು ಈಗಾಗಲೇ ಭರ್ತಿಯಾಗಿವೆ. ಪೊಲೀಸ್ ಇಲಾಖೆಯ ಇತರ ವಿಭಾಗಗಳಲ್ಲಿ ಹುದ್ದೆಗೆ ತಕ್ಕಷ್ಟು ಅಧಿಕಾರಿಗಳಿದ್ದಾರೆ. ಈ ಸಂದರ್ಭದಲ್ಲಿ ಎಸಿಬಿಯಲ್ಲಿ ಇರುವ ಅಧಿಕಾರಿಗಳಿಗೆ ಸ್ಥಳ ತೋರಿಸುವುದೇ ಸರ್ಕಾರಕ್ಕೆ ಸವಾಲಾಗುತ್ತಿದೆ. ಎಸ್‌ಪಿ ಹುದ್ದೆಯಲ್ಲಿ ಇರುವ ಐಪಿಎಸ್, ಕೆಎಸ್‌ಪಿಎಸ್ ಅಧಿಕಾರಿಗಳನ್ನು ಯಾವುದಾದರೂ ಹುದ್ದೆಗೆ ವರ್ಗಾವಣೆ ಮಾಡಬಹುದು. ಆದರೆ ಇನ್​ಸ್ಪೆಕ್ಟರ್ ಮತ್ತು ಡಿವೈಎಸ್‌ಪಿಗಳಿಗೆ ಸ್ಥಳ ನಿಯುಕ್ತಿ ಮಾಡೋದು ಇಲಾಖೆಗೆ ಸವಾಲಾಗಿದೆ.

ಲೊಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ

ಹೈಕೋರ್ಟ್ ಇತ್ತೀಚಿಗೆ ನೀಡಿದ್ದ ತೀರ್ಪಿನ ಪ್ರಮುಖ ಅಂಶಗಳನ್ನು ಕರ್ನಾಟಕ ಸರ್ಕಾರ ಪಾಲಿಸಿದೆ. ಅದರಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಪಡಿಸಲಾಗಿದೆ. ಲೋಕಾಯುಕ್ತ ಪೊಲೀಸರಿಗೆ ಭ್ರಷ್ಟಾಚಾರ ನಿಗ್ರಹದ ಅಧಿಕಾರ ನೀಡಲಾಗಿದೆ. ಲೊಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣೆಗಳಿಗೆ ಇರುವ ಅಧಿಕಾರವನ್ನು ಕೊಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ತನಿಖೆ ಬಾಕಿಯಿರುವ ಎಲ್ಲ ಪ್ರಕರಣಗಳು ಹಾಗೂ ಖಾಸಗಿ ದೂರುಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಸೂಚಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ