AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಕಾರ್ಯಾಕರ್ತರೆಂದು ಹೇಳಿ ಗೋಮಾಂಸದೊಂದಿಗೆ ವ್ಯಕ್ತಿ ಕಿಡ್ನಾಪ್, ಮಹಮ್ಮದ್​​ನ ಅಸಲಿ ಕಹಾನಿ ಇಲ್ಲಿದೆ

ಆರ್​ಎಸ್​ಎಸ್​ ಕಾರ್ಯಕರ್ತರೆಂದು ಬೆದರಿಸಿ ಗೋಮಾಂಸ ಸಾಗಿಸುತ್ತಿದ್ದ ವಾಹನ ಹಾಗೂ ಚಾಲಕನನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆಸಿದ್ದು,​ ಬಳಿಕ ಪೊಲೀಸರ ತನಿಖೆ ವೇಳೆ ವಿಚಾರಣೆಗೊಳಪಡಿಸಿದಾಗ ಆರ್​ಎಸ್​ಎಸ್​ ಹೆಸರಿನಲ್ಲಿ ಗೋಮಾಂಸ್​ ಕಳ್ಳತನ ಕಹಾನಿ ಬಯಲಿಗೆ ಬಂದಿದೆ.

RSS ಕಾರ್ಯಾಕರ್ತರೆಂದು ಹೇಳಿ ಗೋಮಾಂಸದೊಂದಿಗೆ ವ್ಯಕ್ತಿ ಕಿಡ್ನಾಪ್, ಮಹಮ್ಮದ್​​ನ ಅಸಲಿ ಕಹಾನಿ ಇಲ್ಲಿದೆ
ಮಹಮ್ಮದ್(ಆರೋಪಿ)
ಜಗದೀಶ ಬಿ.
| Edited By: |

Updated on: Sep 20, 2023 | 8:22 AM

Share

ಬೆಂಗಳೂರು, (ಸೆಪ್ಟೆಂಬರ್ 20): ಆರ್​ಎಸ್​ಎಸ್ (RSS) ಕಾರ್ಯಾಕರ್ತರೆಂದು ಹೇಳಿಕೊಂಡು ಗೋಮಾಂಸ (beef) ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಸೆಪ್ಟೆಂಬರ್ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಮದ್ ಎನ್ನುವಾತ ಮೂವರು ಯುವಕರನ್ನು ಬಿಟ್ಟು ಗೋಮಾಂಸ ಸಾಗಿಸುತ್ತಿದ್ದ ಜಾವೀದ್​ ಎನ್ನುವಾತನನ್ನು ಗಾಡಿ ಸಮೇತ ಕಿಡ್ನಾಪ್ ಮಾಡಿಸಿದ್ದಾನೆ. ಈ ಬಗ್ಗೆ ದೂರು ದಾಖಲಾದ ಬಳಿಕ ದನದ ಮಾಂಸ ಕಳ್ಳತನದ ಅಸಲಿ ಕಹಾನಿ ಬಯಲಾಗಿದೆ.

ಹೌದು…ಸೆಪ್ಟೆಂಬರ್ 10ರಂದು ಜಾವೀದ್, ಮಹಮದ್ ಎನ್ನುವಾತನ ಅಂಗಡಿಗೆ ವಾಹನದಲ್ಲಿ ಗೋಮಾಂಸ ತುಂಬಿಕೊಂಡು ರಾಮನಗರದಿಂದ ಬೆಂಗಳೂರಿನ ತಿಲಕನಗರಕ್ಕೆ ಬರುತಿದ್ದ. ಈ ಗೋಮಾಂಸ ಕದಿಯಲೆಂದು ಅಂಗಡಿ ಮಾಲೀಕ ಮೂವರು ಯುವಕರನ್ನು ಕಳುಹಿಸಿ ಜಾವೀದ್​​ನನ್ನು ಕಿಡ್ನಾಪ್ ಮಾಡಲು ಹೇಳಿದ್ದ. ಅದರಂತೆ ದನದ ಮಾಂಸ ಗಾಡಿಯಲ್ಲಿಟ್ಟುಕೊಂಡು ಅಂಗಡಿಗೆ ಡೆಲವರಿಗೆ ಮಾಡಲು ಬರುತ್ತಿದ್ದ ಜಾವೀದ್​ನನ್ನು ಮೈಕ್ರೋ ಲೇಔಟ್ ಸಿಗ್ನಲ್ ಬಳಿ ಅಡ್ಡಗಟ್ಟಿ ತಾವು ಆರ್​ಎಸ್​ಎಸ್ ಕಾರ್ಯಕರ್ತರು ಎಂದು ಹೇಳಿದ್ದಾರೆ. ಬಳಿಕ ಗಾಡಿ ಸಮೇತ ಜಾವೀದ್​ನನ್ನು ಕಿಡ್ನಾಪ್ ಮಾಡಿದ್ದರು.

ಇದನ್ನೂ ಓದಿ: ಎಗ್ ರೈಸ್ ಜೊತೆ ಕಬಾಬ್​ ಕೇಳಿದ ಯುವಕ; ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಚಾಕುವಿನಿಂದ ಇರಿದು ಕೊಂದ

ನಂತರ ಜಾವೀದ್​ನನ್ನು ಬಿಟ್ಟು ಕಳುಹಿಸಲು ಒಂದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಕೊನೆಗೆ ಹತ್ತು ಸಾವಿರ ಪಡೆದು ಜಾವೀದ್​ನನ್ನು ಬಿಟ್ಟು ಕಳುಹಿಸಿದ್ದಾರೆ. ಇನ್ನು ತನ್ನ ಗಾಡಿ ಕೊಡಿ ಎಂದು ಕಿಡ್ನಾಪ್​ ಮಾಡಿದ್ದವನ್ನು ಕೇಳಿದ್ದಾನೆ. ಸೆಂಟ್ ಜಾನ್ ಸಿಗ್ನಲ್ ಬಳಿ ಗಾಡಿ ಇದೆ ತಗೆದುಕೋ ಎಂದು ಹೇಳಿ ಕಳುಹಿಸಿದ್ದಾರೆ. ಅದರಂತೆ ಬಳಿಕ ಸಿಗ್ನಲ್ ಬಳಿ ಹೊದಾಗ ಕೇವಲ ಗಾಡಿ ಇತ್ತೆ ಹೊರತು ಅದರಲ್ಲಿದ್ದ ಗೋಮಾಂಸ ಇರಲಿಲ್ಲ. ಬಳಿಕ ಈ ಬಗ್ಗೆ ಜಾವೀದ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ದೂರಿನ ಮೇರೆಗೆ ಕಾರ್ಯಚರಣೆಗಿಳಿದ ಆಡುಗೋಡಿ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರ್​ಎಸ್​ಎಸ್​ ಹೆಸರಿನಲ್ಲಿ ಗೋಮಾಂಸ್​ ಕಳ್ಳತನ ಕಹಾನಿ ಬಯಲಿಗೆ ಬಂದಿದೆ.

ಕಿಡ್ನಾಪ್​ ಮಾಡಿದ್ದವರನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ಅಂಗಡಿ ಮಾಲೀಕ ಮಹಮದ್​ನ ಗೋಮಾಂಸ ಕಳ್ಳತದ ಪ್ಲ್ಯಾನ್ ಬಟಾಬಯಲಾಗಿದೆ. ಜಾವೀದ್​ ಡೆಲವರಿ ಮಾಡಬೇಕಿದ್ದ ಗೋಮಾಂಸದ ಅಂಗಡಿಯ ಮಾಲೀಕನೇ ಕಿಡ್ನಾಪ್ ಮಾಡಿಸಿದ್ದು ಎನ್ನುವುದು ಗೊತ್ತಾಗಿದೆ.

ಕಿಡ್ನಾಪ್​ ಮಾಡಿದ್ದ ಬಳಿಕ ಮಾಂಸ ತನ್ನ ಅಂಗಡಿಗೆ ತರಿಸಿಕೊಂಡು ಗಾಡಿ ಕಳುಹಿಸಿದ್ದ.ನಂತರ ಮಾಂಸ ಡೆಲವರಿಯಾಗಿಲ್ಲ ಎಂದು ಕಥೆ ಬಿಟ್ಟಿದ್ದ. ಬಳಿಕ ಪೊಲೀಸರ ತನಿಖೆ ವೇಳೆ ಅಸಲಿ ಕಹಾನಿ ಬೆಳಕಿಗೆ ಬಂದಿದ್ದು, ಗೋಮಾಂಸ ಕದಿಯಲೆಂದೇ ಈ ಕೃತ್ಯ ಮಾಡಿರುವುದಾಗಿ ವಿಚಾರಣೆ ವೇಳೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಸದ್ಯ ಅಂಗಡಿ ಮಾಲೀಕ ಮಹಮದ್ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!