AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಕಾರ್ಯಾಕರ್ತರೆಂದು ಹೇಳಿ ಗೋಮಾಂಸದೊಂದಿಗೆ ವ್ಯಕ್ತಿ ಕಿಡ್ನಾಪ್, ಮಹಮ್ಮದ್​​ನ ಅಸಲಿ ಕಹಾನಿ ಇಲ್ಲಿದೆ

ಆರ್​ಎಸ್​ಎಸ್​ ಕಾರ್ಯಕರ್ತರೆಂದು ಬೆದರಿಸಿ ಗೋಮಾಂಸ ಸಾಗಿಸುತ್ತಿದ್ದ ವಾಹನ ಹಾಗೂ ಚಾಲಕನನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆಸಿದ್ದು,​ ಬಳಿಕ ಪೊಲೀಸರ ತನಿಖೆ ವೇಳೆ ವಿಚಾರಣೆಗೊಳಪಡಿಸಿದಾಗ ಆರ್​ಎಸ್​ಎಸ್​ ಹೆಸರಿನಲ್ಲಿ ಗೋಮಾಂಸ್​ ಕಳ್ಳತನ ಕಹಾನಿ ಬಯಲಿಗೆ ಬಂದಿದೆ.

RSS ಕಾರ್ಯಾಕರ್ತರೆಂದು ಹೇಳಿ ಗೋಮಾಂಸದೊಂದಿಗೆ ವ್ಯಕ್ತಿ ಕಿಡ್ನಾಪ್, ಮಹಮ್ಮದ್​​ನ ಅಸಲಿ ಕಹಾನಿ ಇಲ್ಲಿದೆ
ಮಹಮ್ಮದ್(ಆರೋಪಿ)
Jagadisha B
| Edited By: |

Updated on: Sep 20, 2023 | 8:22 AM

Share

ಬೆಂಗಳೂರು, (ಸೆಪ್ಟೆಂಬರ್ 20): ಆರ್​ಎಸ್​ಎಸ್ (RSS) ಕಾರ್ಯಾಕರ್ತರೆಂದು ಹೇಳಿಕೊಂಡು ಗೋಮಾಂಸ (beef) ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಸೆಪ್ಟೆಂಬರ್ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಮದ್ ಎನ್ನುವಾತ ಮೂವರು ಯುವಕರನ್ನು ಬಿಟ್ಟು ಗೋಮಾಂಸ ಸಾಗಿಸುತ್ತಿದ್ದ ಜಾವೀದ್​ ಎನ್ನುವಾತನನ್ನು ಗಾಡಿ ಸಮೇತ ಕಿಡ್ನಾಪ್ ಮಾಡಿಸಿದ್ದಾನೆ. ಈ ಬಗ್ಗೆ ದೂರು ದಾಖಲಾದ ಬಳಿಕ ದನದ ಮಾಂಸ ಕಳ್ಳತನದ ಅಸಲಿ ಕಹಾನಿ ಬಯಲಾಗಿದೆ.

ಹೌದು…ಸೆಪ್ಟೆಂಬರ್ 10ರಂದು ಜಾವೀದ್, ಮಹಮದ್ ಎನ್ನುವಾತನ ಅಂಗಡಿಗೆ ವಾಹನದಲ್ಲಿ ಗೋಮಾಂಸ ತುಂಬಿಕೊಂಡು ರಾಮನಗರದಿಂದ ಬೆಂಗಳೂರಿನ ತಿಲಕನಗರಕ್ಕೆ ಬರುತಿದ್ದ. ಈ ಗೋಮಾಂಸ ಕದಿಯಲೆಂದು ಅಂಗಡಿ ಮಾಲೀಕ ಮೂವರು ಯುವಕರನ್ನು ಕಳುಹಿಸಿ ಜಾವೀದ್​​ನನ್ನು ಕಿಡ್ನಾಪ್ ಮಾಡಲು ಹೇಳಿದ್ದ. ಅದರಂತೆ ದನದ ಮಾಂಸ ಗಾಡಿಯಲ್ಲಿಟ್ಟುಕೊಂಡು ಅಂಗಡಿಗೆ ಡೆಲವರಿಗೆ ಮಾಡಲು ಬರುತ್ತಿದ್ದ ಜಾವೀದ್​ನನ್ನು ಮೈಕ್ರೋ ಲೇಔಟ್ ಸಿಗ್ನಲ್ ಬಳಿ ಅಡ್ಡಗಟ್ಟಿ ತಾವು ಆರ್​ಎಸ್​ಎಸ್ ಕಾರ್ಯಕರ್ತರು ಎಂದು ಹೇಳಿದ್ದಾರೆ. ಬಳಿಕ ಗಾಡಿ ಸಮೇತ ಜಾವೀದ್​ನನ್ನು ಕಿಡ್ನಾಪ್ ಮಾಡಿದ್ದರು.

ಇದನ್ನೂ ಓದಿ: ಎಗ್ ರೈಸ್ ಜೊತೆ ಕಬಾಬ್​ ಕೇಳಿದ ಯುವಕ; ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಚಾಕುವಿನಿಂದ ಇರಿದು ಕೊಂದ

ನಂತರ ಜಾವೀದ್​ನನ್ನು ಬಿಟ್ಟು ಕಳುಹಿಸಲು ಒಂದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟು, ಕೊನೆಗೆ ಹತ್ತು ಸಾವಿರ ಪಡೆದು ಜಾವೀದ್​ನನ್ನು ಬಿಟ್ಟು ಕಳುಹಿಸಿದ್ದಾರೆ. ಇನ್ನು ತನ್ನ ಗಾಡಿ ಕೊಡಿ ಎಂದು ಕಿಡ್ನಾಪ್​ ಮಾಡಿದ್ದವನ್ನು ಕೇಳಿದ್ದಾನೆ. ಸೆಂಟ್ ಜಾನ್ ಸಿಗ್ನಲ್ ಬಳಿ ಗಾಡಿ ಇದೆ ತಗೆದುಕೋ ಎಂದು ಹೇಳಿ ಕಳುಹಿಸಿದ್ದಾರೆ. ಅದರಂತೆ ಬಳಿಕ ಸಿಗ್ನಲ್ ಬಳಿ ಹೊದಾಗ ಕೇವಲ ಗಾಡಿ ಇತ್ತೆ ಹೊರತು ಅದರಲ್ಲಿದ್ದ ಗೋಮಾಂಸ ಇರಲಿಲ್ಲ. ಬಳಿಕ ಈ ಬಗ್ಗೆ ಜಾವೀದ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ದೂರಿನ ಮೇರೆಗೆ ಕಾರ್ಯಚರಣೆಗಿಳಿದ ಆಡುಗೋಡಿ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರ್​ಎಸ್​ಎಸ್​ ಹೆಸರಿನಲ್ಲಿ ಗೋಮಾಂಸ್​ ಕಳ್ಳತನ ಕಹಾನಿ ಬಯಲಿಗೆ ಬಂದಿದೆ.

ಕಿಡ್ನಾಪ್​ ಮಾಡಿದ್ದವರನ್ನು ಹಿಡಿದು ವಿಚಾರಣೆಗೊಳಪಡಿಸಿದಾಗ ಅಂಗಡಿ ಮಾಲೀಕ ಮಹಮದ್​ನ ಗೋಮಾಂಸ ಕಳ್ಳತದ ಪ್ಲ್ಯಾನ್ ಬಟಾಬಯಲಾಗಿದೆ. ಜಾವೀದ್​ ಡೆಲವರಿ ಮಾಡಬೇಕಿದ್ದ ಗೋಮಾಂಸದ ಅಂಗಡಿಯ ಮಾಲೀಕನೇ ಕಿಡ್ನಾಪ್ ಮಾಡಿಸಿದ್ದು ಎನ್ನುವುದು ಗೊತ್ತಾಗಿದೆ.

ಕಿಡ್ನಾಪ್​ ಮಾಡಿದ್ದ ಬಳಿಕ ಮಾಂಸ ತನ್ನ ಅಂಗಡಿಗೆ ತರಿಸಿಕೊಂಡು ಗಾಡಿ ಕಳುಹಿಸಿದ್ದ.ನಂತರ ಮಾಂಸ ಡೆಲವರಿಯಾಗಿಲ್ಲ ಎಂದು ಕಥೆ ಬಿಟ್ಟಿದ್ದ. ಬಳಿಕ ಪೊಲೀಸರ ತನಿಖೆ ವೇಳೆ ಅಸಲಿ ಕಹಾನಿ ಬೆಳಕಿಗೆ ಬಂದಿದ್ದು, ಗೋಮಾಂಸ ಕದಿಯಲೆಂದೇ ಈ ಕೃತ್ಯ ಮಾಡಿರುವುದಾಗಿ ವಿಚಾರಣೆ ವೇಳೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಸದ್ಯ ಅಂಗಡಿ ಮಾಲೀಕ ಮಹಮದ್ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ