Aero India 2023: ಮೂರು ದಿನಗಳಲ್ಲಿ 80 ಸಾವಿರ ಕೋಟಿ ರೂ. ಒಪ್ಪಂದ, ಇಂದಿನಿಂದ ಏರ್​ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಈ ಬಾರಿಯ ಏರೋ ಶೋನಲ್ಲಿ, ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿಗಳು ಸದ್ದು ಮಾಡ್ತಿವೆ. ವಿದೇಶದ ರಕ್ಷಣಾ ಅಧಿಕಾರಿಗಳು, ನಗರದ ಸ್ಟಾರ್ಟ್ ಅಪ್ ಕಂಪನಿಗಳ ಜೊತೆ ಸಾವಿರಾರು ಕೋಟಿಯ ಒಡಂಬಡಿಕೆ ಮಾಡಿಕೊಂಡಿವೆ.

Aero India 2023: ಮೂರು ದಿನಗಳಲ್ಲಿ 80 ಸಾವಿರ ಕೋಟಿ ರೂ. ಒಪ್ಪಂದ, ಇಂದಿನಿಂದ ಏರ್​ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ
ಏರೋ ಇಂಡಿಯಾ-2023
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 16, 2023 | 11:25 AM

ಬೆಂಗಳೂರು: ಏಷ್ಯಾದ ಅತಿ ದೊಡ್ಡ ಏರ್​ ಶೋ ‘ಏರೋ ಇಂಡಿಯಾ-2023‘(Aero India 2023) ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿದ್ದು ಕಳೆದ ಮೂರು ದಿನಗಳಿಂದ ಕಮಾಲ್ ಮಾಡುತ್ತಿದೆ. ಬಾನಂಗಳದಲ್ಲಿ ಯುದ್ಧ ವಿಮಾನಗಳ ಕಸರತ್ತು ಕಣ್ಮನ ಸೆಳೆಯುತ್ತಿದೆ. ಸದ್ಯ ಕಳೆದ ಮೂರು ದಿನಗಳಲ್ಲಿ 80 ಸಾವಿರ ಕೋಟಿ ರೂ. ಒಪ್ಪಂದ ಆಗಿದೆ. 226 ಸಹಭಾಗಿತ್ವ, 201 ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಯುದ್ಧ ವಿಮಾನಗಳ ಖರೀದಿ, ನಿರ್ಮಾಣ ಸಂಬಂಧ ಏರೋ ಇಂಡಿಯಾದಲ್ಲಿ ಕಂಪನಿಗಳ ನಡುವೆ ಪರಸ್ಪರ ಒಪ್ಪಂದಗಳಾಗಿವೆ.

ಈ ಬಾರಿಯ ಏರೋ ಶೋನಲ್ಲಿ, ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿಗಳು ಸದ್ದು ಮಾಡ್ತಿವೆ. ವಿದೇಶದ ರಕ್ಷಣಾ ಅಧಿಕಾರಿಗಳು, ನಗರದ ಸ್ಟಾರ್ಟ್ ಅಪ್ ಕಂಪನಿಗಳ ಜೊತೆ ಸಾವಿರಾರು ಕೋಟಿಯ ಒಡಂಬಡಿಕೆ ಮಾಡಿಕೊಂಡಿವೆ. ಗೋಪಾಲನ್ ಏರೋ ಸ್ಪೇಸ್ ಕಂಪನಿಯ ಡ್ರೋನ್​​ ಎಲ್ಲರ ಗಮನ ಸೆಳೆಯುತ್ತಿದೆ. ಏರೋ ಇಂಡಿಯಾದಲ್ಲಿ ಬೆಮಲ್‌ ನ ಮಾವನ ರಹಿತ ಮೆಟ್ರೋ ರೈಲು ಕಣ್ಮನ ಸೆಳೆಯುತ್ತಿದೆ. ಇದರ ಜೊತೆಗೆ ಅಗ್ನಿಕಾ ಹೆಸರಿನ ಚಾಲಕನಿಲ್ಲದ ವಿಮಾನವೂ ಸಾಕಷ್ಟು ಸದ್ದು ಮಾಡ್ತಿದೆ.

ಇದನ್ನೂ ಓದಿ: Air India: ಏರ್ ಇಂಡಿಯಾ ಭರ್ಜರಿ ಡೀಲ್; ಫ್ರಾನ್ಸ್, ಅಮೆರಿಕದಿಂದ ದಾಖಲೆ ಸಂಖ್ಯೆಯಲ್ಲಿ ವಿಮಾನ ಖರೀದಿ

ಇಂದಿನಿಂದ 2 ದಿನ ಏರ್​ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ-2023 ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಇಂದಿನಿಂದ 2 ದಿನ ಏರ್​ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದ್ದು ಆನ್​​ಲೈನ್​ನಲ್ಲಿ ಟಿಕೆಟ್ ಖರೀದಿಸಿದವರಿಗಷ್ಟೇ ಪ್ರವೇಶಕ್ಕೆ ಅನುಮತಿ. ಸಾರಂಗ್​ ಹೆಲಿಕಾಪ್ಟರ್​​, ಸೂರ್ಯ ಕಿರಣ್​​, ತೇಜಸ್ ಯುದ್ಧ ವಿಮಾನ, ರಫೆಲ್​​​​ ಯುದ್ಧ ವಿಮಾನ, ಅಮೆರಿಕದ F-35A ಫೈಟರ್​​ ಜೆಟ್​​, HAL ನಿರ್ಮಿತ ಲೈಟ್​ ಕಾಂಬ್ಯಾಕ್ಟ್​ ಹೆಲಿಕಾಪ್ಟರ್​ಗಳ ಪ್ರದರ್ಶನ ಇಡಲಾಗಿದೆ.

ಇಂದು ಬೆಳಗ್ಗೆ 11 ಗಂಟೆಯಿಂದ ವೈಮಾನಿಕ ಪ್ರದರ್ಶನ ಶೋ ಆರಂಭವಾಗಲಿದೆ. ಇಂದು ಏರ್ ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:36 am, Thu, 16 February 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ