AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಈ ಬಾರಿಯ ಏರ್​ ಶೋನಲ್ಲಿ ಏನು ವಿಶೇಷತೆಗಳು? ಇಲ್ಲಿವೆ ನೋಡಿ

Aero India Air Show: ನಾಳೆ (ಫೆ.13) ರಿಂದ 5 ದಿನಗಳ ಕಾಲ (ಫೆ.17)ರವರೆಗೆ ಬೆಂಗಳೂರಿನ ಯಲಹಂಕ ಏರ್​ಬೇಸ್​ನಲ್ಲಿ 2023ರ 14ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ನಡೆಯಲಿದೆ. ಏರೋ ಇಂಡಿಯಾದ ವೈಮಾನಿಕ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

Aero India 2023: ಈ ಬಾರಿಯ ಏರ್​ ಶೋನಲ್ಲಿ ಏನು ವಿಶೇಷತೆಗಳು? ಇಲ್ಲಿವೆ ನೋಡಿ
ಏರ್​ ಶೋ ತಯಾರಿ
TV9 Web
| Updated By: ವಿವೇಕ ಬಿರಾದಾರ|

Updated on: Feb 12, 2023 | 8:15 PM

Share

ಬೆಂಗಳೂರು: ನಾಳೆ (ಫೆ.13) ರಿಂದ 5 ದಿನಗಳ ಕಾಲ (ಫೆ.17)ರವರೆಗೆ ಬೆಂಗಳೂರಿನ ಯಲಹಂಕ ಏರ್​ಬೇಸ್​ನಲ್ಲಿ 2023ರ 14ನೇ ಆವೃತ್ತಿಯ ವೈಮಾನಿಕ ಪ್ರದರ್ಶನ (Air Show) ನಡೆಯಲಿದೆ. ಏರೋ ಇಂಡಿಯಾದ (Aero India) ವೈಮಾನಿಕ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಉದ್ಘಾಟಿಸಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಇಂದು (ಫೆ.12) ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಲ್ಲಿ 1996ರಿಂದ ಪ್ರಾರಂಭವಾದ ಈ ವೈಮಾನಿಕ ಪ್ರದರ್ಶನ 2 ವರ್ಷಕ್ಕೊಮ್ಮೆ ನಡೆಯುತ್ತದೆ. ಈ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲು ದೇಶ-ವಿದೇಶದ ನಾಯಕರು ಮತ್ತು ಜನರು ಆಗಮಿಸುತ್ತಾರೆ. ವೈಮಾನಿಕ ಪ್ರದರ್ಶನ ಬೆಂಗಳೂರಲ್ಲಿ 13 ಬಾರಿ ನಡೆದಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ 14ನೇ ಆವೃತ್ತಿಯದ್ದಾಗಿದೆ. ಹಾಗಿದ್ದರೆ ಈ ಬಾರಿಯ ವೈಮಾನಿಕ ಪ್ರದರ್ಶನ ವೈಶಿಷ್ಟ್ಯ ಇಲ್ಲಿದೆ.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೈಶಿಷ್ಟ್ಯ

ಯಲಹಂಕ ಏರ್​ಬೇಸ್​ನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆಯೋಜಿಸಲಾಗಿದೆ. 35 ಸಾವಿರ ಚದರ ಅಡಿ ಪ್ರದೇಶದಲ್ಲಿ ಎಕ್ಸಿಬಿಷನ್​ ಆಯೋಜನೆ ಮಾಡಲಾಗಿದೆ. 67 ಫ್ಲೈಯಿಂಗ್ ಡಿಸ್ಪ್ಲೇ, 36 ಸ್ಟ್ಯಾಂಡಿಂಗ್ ಡಿಸ್ಪ್ಲೇ, 809 ಪ್ರದರ್ಶಕರು ಇಲ್ಲಿಯವರೆಗೆ ನೋಂದಾಯಿಸಿಕೊಂಡಿದ್ದಾರೆ. 809 ಪ್ರದರ್ಶಕರಲ್ಲಿ 699 ಭಾರತೀಯ ಪ್ರದರ್ಶಕರು, 110 ವಿದೇಶಿ ಪ್ರದರ್ಶಕರಿದ್ದಾರೆ. 2021 ರಲ್ಲಿ, 55 ದೇಶಗಳ ಪ್ರತಿನಿಧಿಗಳು ಮತ್ತು 540 ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಿದ್ದರು. ಈ ಬಾರಿ 251 ಎಂಒಯು, 98 ವಿದೇಶಿ ಕಂಪನಿಗಳು ಏರ್​ಶೋನಲ್ಲಿ ಭಾಗಿಯಾಗಲಿದ್ದಾರೆ. ಇಂಡಿಯನ್ ಪೆವಿಲಿಯನ್​ನಲ್ಲಿ 115 ಕಂಪನಿ, 227 ಪ್ರಾಡಕ್ಟ್ಸ್​ ಪ್ರದರ್ಶನ ಮಾಡಲಾಗುತ್ತದೆ. ಏರ್​ಶೋ-2023ನಲ್ಲಿ 3 ದಿನಗಳಲ್ಲಿ 9 ಸೆಮಿನಾರ್​ ಆಯೋಜನೆ ಮಾಡಲಾಗಿದೆ. ಏರ್​ಶೋ ಮೊದಲ ದಿನ ಸಿಇಒಗಳ ರೌಂಡ್ ಟೇಬಲ್​ ಮೀಟ್​ ಇರುತ್ತದೆ. ಈ ಸಮಿನಾರ್​ನಲ್ಲಿ ಮಾಜಿ ಸೈನಿಕರನ್ನು ಹೇಗೆ ಬಳಸಿಕೊಳ್ಳಬಹುದರ ಎಂಬ ಬಗ್ಗೆ ಚರ್ಚೆಯಾಗುತ್ತದೆ. 27 ಭಾರತೀಯ ಕಂಪನಿಗಳು ಸೇರಿದಂತೆ 73 ಕಂಪನಿಗಳು ಭಾಗಿಯಾಗುತ್ತವೆ. ಫೆ.14ರಂದು ಏರ್​ಶೋನಲ್ಲಿ 32 ದೇಶಗಳ ರಕ್ಷಣಾ ಸಚಿವರು ಭಾಗಿಯಾಗುತ್ತಾರೆ. 251ಕ್ಕೂ ಹೆಚ್ಚು ಬಂಧನ್​ಗಳ ನಿರೀಕ್ಷೆ ಇದೆ. ಬಂಧನ್​ನಿಂದ 75 ಸಾವಿರ ಕೋಟಿ ವ್ಯಾಪಾರ ವಹಿವಾಟುವಾಗುವ ನಿರೀಕ್ಷೆ ಇದೆ. ರಾಜ್ಯ ಸರ್ಕಾರ ಜತೆ 32 ಎಂಒಯು ಒಪ್ಪಂದವಾಗಲಿದೆ.

ಇದನ್ನೂ ಓದಿ: ದೇಶೀಯ ಉತ್ಪಾದನೆ, ಕೌಶಲ್ಯಗಳ ಪ್ರದರ್ಶನಕ್ಕೆ ಏರೋ ಇಂಡಿಯಾ ಉತ್ತಮ ವೇದಿಕೆ- ರಾಜನಾಥ್​ ಸಿಂಗ್​

ಯುದ್ಧ ವಿಮಾನ ಮತ್ತು ಹೆಲಿಕಾಪ್ಟ್​ರ್​​ಗಳು

ಭಾರತೀಯ ರಕ್ಷಣಾ ಪಡೆಯ ತೇಜಸ್​, ಸೂರ್ಯಕಿರಣ್​, ಸಾರಂಗ, ರಫೇಲ್​, ಎಲ್​ಸಿಎ, ಸುಕೋಯ್​-30, ಎಂಕೆ-1, ಲಘು ಯುದ್ಧ ವಿಮಾನ (LCA)-ತೇಜಸ್, HTT-40, ಡೋರ್ನಿಯರ್ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (LUH), ಲಘು ಯುದ್ಧ ಹೆಲಿಕಾಪ್ಟರ್ (LCH) ಮತ್ತು ಸುಧಾರಿತ ಲಘು ಹೆಲಿಕಾಪ್ಟರ್ (ALH) ಸೇರಿದಂತೆ 40ಕ್ಕೂ ಅಧಿಕ ಯುದ್ಧ ವಿಮಾನಗಳು ಪ್ರದರ್ಶನವಾಗಲಿವೆ.

ಡಿಆರ್​ಡಿಒ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುತ್ತದೆ. ಇಂಡಿಯಾ ಪೆವಿಲಿಯನ್‌ನಲ್ಲಿ ಡಿಆರ್​ಡಿಒ ಪ್ರಮುಖ ಉತ್ಪನ್ನಗಳನ್ನು ಪ್ರದರ್ಶಿಸುವುದರ ಜೊತೆಗೆ ಏರೋನಾಟಿಕಲ್ ಸಿಸ್ಟಮ್ಸ್, ಕ್ಷಿಪಣಿಗಳು, ಶಸ್ತ್ರಾಸ್ತ್ರಗಳು, ಎಲೆಕ್ಟ್ರಾನಿಕ್ಸ್, ಮೈಕ್ರೋ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಕಂಪ್ಯೂಟೇಶನಲ್ ಸಿಸ್ಟಮ್ಸ್, ಸೋಲ್ಜರ್ ಸಪೋರ್ಟ್ ಟೆಕ್ನಾಲಜೀಸ್, ಲೈಫ್-ಸೈನ್ಸ್, ನೌಕಾ ಮತ್ತು ಮೆಟೀರಿಯಲ್ ಸೈನ್ಸ್ ಇತರ ಉತ್ಪನ್ನಗಳ ಪ್ರದರ್ಶನವನ್ನು ಒಳಗೊಂಡಿರುತ್ತದೆ.

ವೈಮಾನಿಕ ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಜಿಕೆವಿಕೆ, ಜಕ್ಕೂರಿನಲ್ಲಿ ಸಾರ್ವಜನಿಕರ ವಾಹನ ನಿಲುಗಡೆಗೆ ಅವಾಕಾಶ ನೀಡಲಾಗಿದೆ. ಅಲ್ಲಿಂದ ಯಲಹಂಕ ವಾಯುನೆಲೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಏರ್​ಶೋ ಉದ್ಘಾಟನೆ ಕಾರ್ಯಕ್ರಮದಲ್ಲಿ 4000 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ಫೆಬ್ರವರಿ 16 ರಂದು ಮಾತ್ರ ಸಾರ್ವಜನಿಕ ವೀಕ್ಷಣೆಗೆ ಅವಕಾಶವಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ವೈಮಾನಿಕ ಪ್ರದರ್ಶನ ವೀಕ್ಷಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ