AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಶೋಗೆ ಇಂದು ಚಾಲನೆ: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ

Aero India 2025: ಗಾಳಿಯನ್ನು ಸೀಳಿ ಮುನ್ನುಗ್ಗುವ ಮಿಗ್, ಸುಯ್ ಎಂದು ಸಾಗುವ ಸುಖೋಯ್, ಆಗಸದಲ್ಲಿ ಅಪಾಚಿ ಚಾಪರ್ ಆರ್ಭಟ, ರಫೆಲ್ ಫೈಟರ್ ಜೆಟ್ ಮೋಡಿ! ಬಾನಂಗಳದಲ್ಲಿ ಚಿತ್ತಾರ ಮೂಡಿಸಲು ಲೋಹದ ಹಕ್ಕಿಗಳು ರೆಡಿ ಆಗಿವೆ. ಮೈ ನವಿರೇಳಿಸುವ ಐತಿಹಾಸಿಕ ಬೆಂಗಳೂರು ಏರ್​ಶೋಗೆ ಇಂದು ಅದ್ಧೂರಿ ಚಾಲನೆ ಸಿಗುತ್ತಿದೆ.

ಬೆಂಗಳೂರು ಏರ್​ಶೋಗೆ ಇಂದು ಚಾಲನೆ: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಕ್ಷಣಗಣನೆ
ಬೆಂಗಳೂರು ಏರ್ ಶೋ (ಸಂಗ್ರಹ ಚಿತ್ರ)
ಶಾಂತಮೂರ್ತಿ
| Edited By: |

Updated on:Feb 10, 2025 | 9:24 AM

Share

ಬೆಂಗಳೂರು, ಫೆಬ್ರವರಿ 10: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್​​ ಶೋಗೆ ಇಂದು ಅದ್ದೂರಿ ಚಾಲನೆ ಸಿಗುತ್ತಿದೆ. ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. ‘‘ರನ್​ವೇ ಟು ಬಿಲಿಯನ್ ಅಪಾರ್ಚುನಿಟಿಸಿ’’ ಟ್ಯಾಗ್ ಲೈನ್​ನಲ್ಲಿ‌ ಏರ್​ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್​ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.

ಏರ್​​ಶೋದಲ್ಲಿ ರಷ್ಯಾ ಮತ್ತು ಅಮೆರಿಕನ್​ ಫೈಟ್​ ಏರ್​ಕ್ರಾಫ್ಟ್​ಗಳು ಭಾಗಿ ಆಗಲಿವೆ. 100 ದೇಶಗಳ 900ಕ್ಕೂ ಹೆಚ್ಚು ರಕ್ಷಣಾ ಸಾಮಗ್ರಿ ಉತ್ಪಾದಕರು ಭಾಗವಹಿಸಲಿದ್ದಾರೆ. ವಿವಿಧ ಕಂಪನಿಗಳ 100 ಸಿಇಒಗಳು, 50 ವಿದೇಶಿ ಒಎಂಎಸ್ ಉಪಸ್ಥಿತರಿರಲಿದ್ದಾರೆ. ಎಐ, ಸೈಬರ್ ಸೆಕ್ಯುರಿಟಿ, ಡ್ರೋನ್ ಮತ್ತು ಗ್ಲೋಬಲ್​ ಏರೋಸ್ಪೇಸ್ ಪ್ರದರ್ಶನವಿದೆ. ಆತ್ಮನಿರ್ಭರ ಭಾರತದ ಉತ್ಪನ್ನಗಳು ಇರಲಿದ್ದು 10 ಸೆಮಿನಾರ್​​ಗಳು ಆಯೋಜಿಸಲಾಗಿದೆ. ರಕ್ಷಣಾ ವಲಯದಲ್ಲಿ ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯ ಬಗ್ಗೆ ಚರ್ಚೆ ಆಗಲಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏರೋ ಇಂಡಿಯಾ ಬರೀ ವೈಮಾನಿಕ ಪ್ರದರ್ಶನ ಅಷ್ಟೇ ಅಲ್ಲ. ದೇಶದ ಆರ್ಥಿಕತೆ, ರಕ್ಷಣಾ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತಮ ವೇದಿಕೆ ಎಂದಿದ್ದಾರೆ.

ಸಂಚಾರ ಬದಲಾವಣೆ: ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಏರ್​​ಶೋನಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಯಲಹಂಕ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ ಶೋ: ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ, ಪಾರ್ಕಿಂಗ್, ಏರ್​ಪೋರ್ಟ್​ಗೆ ಬದಲಿ ಮಾರ್ಗ ವಿವರ ಇಲ್ಲಿದೆ

ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿ ಹಾಗೂ ಬಾಗಲೂರು ಮುಖ್ಯರಸ್ತೆಯಲ್ಲೂ ಏಕಮುಖ ಸಂಚಾರ ಇದೆ. GKVK ಕ್ಯಾಂಪಸ್​​​ನಲ್ಲಿ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ಅಲ್ಲಿಂದ ಉಚಿತ ಬಿಎಂಟಿಸಿ ಎಸಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಫೆಬ್ರವರಿ 14ರವರೆಗೆ ಲೋಹದ ಹಕ್ಕಿಗಳು ಚಿತ್ತಾರ ಮೂಡಿಸಲಿವೆ. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಜನ ಏರ್​ಶೋದಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ. ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಕೂಡ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 am, Mon, 10 February 25

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!