AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್ ಶೋ: ಜರ್ಮನ್ ಪೈಲಟ್​ಗಳಿಗೂ ತಟ್ಟಿದ ಟ್ರಾಫಿಕ್ ಜಾಮ್ ಬಿಸಿ, ಉದ್ಘಾಟನಾ ಸಮಾರಂಭ ಮಿಸ್

ಬೆಂಗಳೂರಿನ ಏರೋ ಇಂಡಿಯಾ ಏರ್ ಶೋಗೆ ಆಗಮಿಸಿದ ಜರ್ಮನಿಯ 15 ಮಂದಿ ಪೈಲಟ್‌ಗಳು ಭಾರಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಉದ್ಘಾಟನಾ ಸಮಾರಂಭದಿಂದ ವಂಚಿತರಾಗಿದ್ದ ಬಗ್ಗೆ ವರದಿಯಾಗಿದೆ. ಉಳಿದುಕೊಂಡಿದ್ದ ಹೋಟೆಲ್‌ನಿಂದ ಏರ್ ಶೋ ಸ್ಥಳಕ್ಕೆ ತೆರಳುವಾಗ ಅವರು ಎರಡು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದರು.

ಬೆಂಗಳೂರು ಏರ್ ಶೋ: ಜರ್ಮನ್ ಪೈಲಟ್​ಗಳಿಗೂ ತಟ್ಟಿದ ಟ್ರಾಫಿಕ್ ಜಾಮ್ ಬಿಸಿ, ಉದ್ಘಾಟನಾ ಸಮಾರಂಭ ಮಿಸ್
ಬೆಂಗಳೂರು ಟ್ರಾಫಿಕ್ ಜಾಮ್
Ganapathi Sharma
|

Updated on: Feb 11, 2025 | 12:30 PM

Share

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಏರ್​ಶೋಗೆ ಬಂದ ಜರ್ಮನಿಯ ಪೈಲಟ್​ಗಳಿಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಪರಿಣಾಮವಾಗಿ 15 ಮಂದಿ ಪೈಲಟ್​ಗಳಿಗೆ ಏರ್ ಶೋ ಉದ್ಘಾಟನಾ ಸಮಾರಂಭವೇ ಮಿಸ್ ಆಗಿದೆ! ಜರ್ಮನ್ ಪೈಲಟ್‌ಗಳು ತಾವು ಉಳಿದುಕೊಂಡಿದ್ದ ಹೋಟೆಲ್‌ನಿಂದ ಖಾಸಗಿ ಕ್ಯಾಬ್‌ನಲ್ಲಿ ಸೋಮವಾರ ಏರ್​ಶೋ ನಡೆಯುವ ಸ್ಥಳಕ್ಕೆ ತೆರಳಿದ್ದರು. ಸುಮಾರು ಎರಡು ಗಂಟೆಗಳ ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡ ಕಾರಣ ಅವರಿಗೆ, ಉದ್ಘಾಟನಾ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.

ವಿದೇಶಿ ಪ್ರತಿನಿಧಿಗಳಿಗೆಂದೇ ಸಂಚಾರ ಪೊಲೀಸರು ವ್ಯವಸ್ಥೆ ಮಾಡಿದ ಲೇನ್​ನಲ್ಲಿ ಜರ್ಮನಿಯ ಪೈಲಟ್​​ಗಳಿದ್ದ ಕ್ಯಾಬ್ ಪ್ರಯಾಣಿಸದೇ ಇದ್ದುದು ಅವರು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿಕೊಳ್ಳಲು ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

ಕಳೆದ ವಾರ ತಮ್ಮ A330 ಪ್ರಯಾಣಿಕ ವಿಮಾನದಲ್ಲಿ ಯಲಹಂಕ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದ್ದ ಜರ್ಮನಿ ಪೈಲಟ್​ಗಳ ತಂಡ ಏರೋ ಇಂಡಿಯಾ ಸ್ಥಳದಿಂದ 17 ಕಿ.ಮೀ ದೂರದಲ್ಲಿರುವ ಹೋಟೆಲ್‌ನಲ್ಲಿ ತಂಗಿತ್ತು. ಅವರು ಬೆಳಗ್ಗೆ 8 ಗಂಟೆ ಸುಮಾರಿಗೆ ಹೋಟೆಲ್‌ನಿಂದ ಹೊರಟು ಸಮಾರಂಭದ ಸ್ಥಳಕ್ಕೆ 11 ಗಂಟೆಗೆ ತಲುಪಿದ್ದರು. ಅಷ್ಟರಲ್ಲಾಗಲೇ ಉದ್ಘಾಟನಾ ಸಮಾರಂಭ ಮುಕ್ತಾಯವಾಗಿತ್ತು.

ಜರ್ಮನಿ ಪೈಲಟ್​ಗಳು ಹೇಳಿದ್ದೇನು?

ನಾವು ಏರ್ ಶೋ ಸ್ಥಳದ ಸಮೀಪ ತಲುಪುವವರೆಗೂ ಸಂಚಾರ ಸುಗಮವಾಗಿತ್ತು. ಆದರೆ, ಪ್ರವೇಶ ದ್ವಾರದಲ್ಲಿ ನಾವು ಸುಮಾರು ಒಂದೂವರೆ ಗಂಟೆಗಳ ಕಾಲ ಸಿಲುಕಿಕೊಂಡೆವು ಎಂದು ಹೆಸರು ಬಹಿರಂಗಪಡಿಸಲು ಬಯಸದ ಜರ್ಮನ್ ಪೈಲಟ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಹಿಂದಿನ ದಿನವಷ್ಟೇ ನಮ್ಮ ಸ್ಥಳೀಯ ಮಾರ್ಗದರ್ಶಿ ಮತ್ತು ನಾವು ನಗರದ ಮೂಲಸೌಕರ್ಯ, ಸಂಚಾರ ದಟ್ಟಣೆ ಬಗ್ಗೆ ಚರ್ಚಿಸುತ್ತಿದ್ದೆವು. ಇದೀಗ ನಾವು ಅದನ್ನು ನೇರವಾಗಿ ಅನುಭವಿಸಿದೆವು ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಏರೋ ಇಂಡಿಯಾ ಬಗ್ಗೆ ನಾವು ನಿರಾಶರಾಗಿಲ್ಲ. ನಾವು ಸ್ಥಳೀಯ ಜನರೊಂದಿಗೆ ಹೆಚ್ಚು ಸಂವಹನ ನಡೆಸಲು ಮತ್ತು ನಮ್ಮ ವಿಮಾನಗಳ ಬಗ್ಗೆ ಪ್ರಚಾರ ಮಾಡುವುದನ್ನು ಎದುರು ನೋಡುತ್ತಿದ್ದೇವೆ. ನಾವು ಮೊದಲ ದಿನದ ಪ್ರದರ್ಶನವನ್ನು ತಪ್ಪಿಸಿಕೊಂಡರೂ ಪರವಾಗಿಲ್ಲ. ಉಳಿದ ದಿನಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏರ್​ಶೋ: ಏರ್​ಪೋರ್ಟ್​​ ರಸ್ತೆಯಲ್ಲಿ ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್​

ಏತನ್ಮಧ್ಯೆ, ವಿದೇಶಿ ಗಣ್ಯರಿಗಾಗಿ ಉತ್ತಮ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಜರ್ಮನ್ ಪೈಟಲ್​ಗಳ ತಂಡವು ನಾವು ಮಾಡಿದ ವ್ಯವಸ್ಥೆಗಳನ್ನು ಸ್ಪಷ್ಟವಾಗಿ ತಪ್ಪಿಸಿಕೊಂಡಿದೆ. ಟ್ರಾಫಿಕ್ ಪೊಲೀಸರು ಪ್ರತ್ಯೇಕ ಲೇನ್ ಅನ್ನು ರಚಿಸಿದ್ದರು. ಪ್ರತಿನಿಧಿಗಳ ಅನುಕೂಲಕ್ಕಾಗಿ ಮಾತ್ರ ಈ ಲೇನ್ ಅನ್ನು ರಚಿಸಲಾಗಿದೆ. ಜರ್ಮನ್ ಪೈಲಟ್​ಗಳ ತಂಡ ತಪ್ಪಾಗಿ ಬೇರೆ ಲೇನ್​ನಲ್ಲಿ ಬಂದಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ