AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಮ್ಮೆ ಏರ್‌ಶೋ ಧಮಾಕಾ: ‘ಏರೋ ಇಂಡಿಯಾ-2027’ ದಿನಾಂಕ ಘೋಷಣೆ

ಬೆಂಗಳೂರಿನಲ್ಲಿ ಏರೋ ಇಂಡಿಯಾ ೨೦೨೭ ರ ೧೬ನೇ ಆವೃತ್ತಿಯು ಫೆಬ್ರವರಿ ೮ ರಿಂದ ೧೨ ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ. HAL ಆಯೋಜಿಸುವ ಈ ಜಾಗತಿಕ ಏರೋಸ್ಪೇಸ್ ಪ್ರದರ್ಶನವು ರಕ್ಷಣಾ ಕಂಪನಿಗಳು, ತಜ್ಞರು ಮತ್ತು ನವೋದ್ಯಮಿಗಳನ್ನು ಒಂದೇ ಸೂರಿನಡಿ ತರಲಿದೆ. ಯುದ್ಧ ವಿಮಾನಗಳ ಪ್ರದರ್ಶನ ಹಾಗೂ ವೈಮಾನಿಕ ಸಾಹಸಗಳು ಕಣ್ಣಿನ ಹಬ್ಬವಾಗಲಿವೆ.

ಬೆಂಗಳೂರಿನಲ್ಲಿ ಮತ್ತೊಮ್ಮೆ ಏರ್‌ಶೋ ಧಮಾಕಾ: 'ಏರೋ ಇಂಡಿಯಾ-2027' ದಿನಾಂಕ ಘೋಷಣೆ
ಸಾಂದರ್ಭಿಕ ಚಿತ್ರ Image Credit source: Google
ಕಿರಣ್​ ಸೂರ್ಯ
| Edited By: |

Updated on: Sep 02, 2026 | 10:38 PM

Share

ಬೆಂಗಳೂರು, ಸೆ.2: ದೇಶದ ಸಾಫ್ಟ್‌ವೇರ್ ಹಾಗೂ ಏರೋಸ್ಪೇಸ್ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಜಾಗತಿಕ ಮಟ್ಟದ ಏರ್‌ಶೋ (Air Show) ಸದ್ದು ಮಾಡಲಿದೆ. ಏರೋ ಇಂಡಿಯಾ ೨೦೨೭ರ (Aero India 2027) ೧೬ನೇ ಆವೃತ್ತಿಯು ರಾಜಧಾನಿ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಆಯೋಜನೆಯಾಗಲಿದ್ದು, ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

2027 ರ ಫೆಬ್ರವರಿ 8 ರಿಂದ 12 ರವರೆಗೆ ಒಟ್ಟು 5 ದಿನಗಳ ಕಾಲ ಈ ಬೃಹತ್ ಏರೋಸ್ಪೇಸ್ ಪ್ರದರ್ಶನ ನಡೆಯಲಿದೆ. ಭಾರತ ಸರ್ಕಾರದ ರಕ್ಷಣಾ ಉತ್ಪಾದನಾ ಇಲಾಖೆಯ ಪರವಾಗಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಪ್ರಮುಖ ನೋಡಲ್ ಏಜೆನ್ಸಿಯಾಗಿ (Nodal Agency) ಕಾರ್ಯನಿರ್ವಹಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳನ್ನು ಆರಂಭಿಸಿದೆ.

ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಈ ಪ್ರದರ್ಶನವು ಪ್ರಪಂಚದ ಮುಂಚೂಣಿಯ ಏರೋಸ್ಪೇಸ್ ಹಾಗೂ ರಕ್ಷಣಾ ವಲಯದ ಬೃಹತ್ ಕಂಪನಿಗಳನ್ನು ಒಂದೇ ಸೂರಿನಡಿ ತರಲಿದೆ. ಜಾಗತಿಕ ತಂತ್ರಜ್ಞಾನ ತಜ್ಞರು, ನವೋದ್ಯಮಿಗಳು (Startups), ವಿವಿಧ ದೇಶಗಳ ರಕ್ಷಣಾ ಪಡೆಗಳ ಹಿರಿಯ ಅಧಿಕಾರಿಗಳು ಹಾಗೂ ಜಾಗತಿಕ ನೀತಿ ನಿರೂಪಕರು ಈ ಬೃಹತ್ ಆವೃತ್ತಿಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಬಿಸಿಯೂಟ ಸೇವಿಸುವಾಗಲೇ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ವೈಮಾನಿಕ ಸಾಹಸಗಳು ಹಾಗೂ ಅತ್ಯಾಧುನಿಕ ಯುದ್ಧ ವಿಮಾನಗಳ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆ ಮತ್ತೊಮ್ಮೆ ಸಾಕ್ಷಿಯಾಗಲಿದ್ದು, ಬೆಂಗಳೂರಿಗರಿಗೆ ಭರಪೂರ ಕಣ್ಣಿನ ಹಬ್ಬ ಕಾಯುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!