Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 15 ಅಪ್ಘನ್ ಪ್ರಜೆಗಳಿಂದ ಅಕ್ರಮ ವಾಸ; ವರದಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಪ್ಘಾನಿಸ್ತಾನದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ 15 ಅಪ್ಘನ್ ಪ್ರಜೆಗಳಿಂದ ಅಕ್ರಮ ವಾಸ; ವರದಿ
ಖಜಾನೆ ಬರಿದಾದ ದೇಶವೊಂದನ್ನು ಇಟ್ಟುಕೊಂಡು ಏನು ಆಡಳಿತ ಮಾಡುವುದಕ್ಕೆ ಸಾಧ್ಯ? ಸರಿ, ನೆರೆಹೊರೆಯವರ ಸಹಕಾರ ಇದೆಯಾ? ಆಡಳಿತಗಾರರ ಸಲುವಾಗಿ ಮನಸಾರೆ ತ್ಯಾಗ ಮಾಡುವುದಕ್ಕಾದರೂ ಅಲ್ಲಿನ ಪ್ರಜೆಗಳು ಸಿದ್ಧರಿದ್ದಾರಾ? ಈ ಪೈಕಿ ಯಾವುದಕ್ಕೂ ಸಕಾರಾತ್ಮಕ ಉತ್ತರ ಸಿಗಲ್ಲ. ಈಗ ಹೇಳಲು ಹೊರಟಿರುವುದು ಆರ್ಥಿಕ ಪತನದ ಅಂಚಿನಲ್ಲಿ ಭರವಸೆ ಕೂಡ ದಿವಾಳಿಯಾದ ಅಫ್ಘಾನಿಸ್ತಾನದ ಬಗ್ಗೆ. 20 ವರ್ಷಗಳ ಕಾಲ ಅಫ್ಘಾನಿಸ್ತಾನದಲ್ಲಿ ಸೇನೆಯನ್ನು ಬಿಟ್ಟಿದ್ದ ಅಮೆರಿಕಾ, ಅಲ್ಲಿಂದ ಹೊರಗೆ ಕಾಲಿಡುತ್ತಾ, ತಾಲಿಬಾನ್​ಗಳು ದೇಶದ ಆಡಳಿತದ ಚುಕ್ಕಾಣಿ ಕೈಗೆತ್ತಿಕೊಳ್ಳುವ ಹೊತ್ತಿಗೆ ಪರಿಸ್ಥಿತಿ ಏನು ಗೊತ್ತಾ? ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಅಫ್ಘಾನಿಸ್ತಾನವೂ ಒಂದು ಅಂತಾಗಿದೆ. ಇನ್ನು ವಿಶ್ವದ ಇತರ ದೇಶಗಳು ಸಹ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವು ಹಾಗೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿವೆ.
Follow us
TV9 Web
| Updated By: guruganesh bhat

Updated on: Aug 17, 2021 | 4:39 PM

ಬೆಂಗಳೂರು: ವೈದ್ಯಕೀಯ ಚಿಕಿತ್ಸೆಗೆಂದು ಬೆಂಗಳೂರಿಗೆ ಆಗಮಿಸಿ ವೀಸಾ ಅವಧಿ ಮುಗಿದರೂ ಮರಳಿ ತೆರಳದ 15 ಅಪ್ಘನ್ ಪ್ರಜೆಗಳು ಬೆಂಗಳೂರು ನಗರದಲ್ಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವೀಸಾ ಅವಧಿ ಮುಗಿದರೂ ಅಪ್ಘಾನಿಸ್ತಾನದ 15 ಪ್ರಜೆಗಳು ಅಕ್ರಮ ವಾಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. 

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಪ್ಘಾನಿಸ್ತಾನದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈ ವಶವಾದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಆಫ್ಘನ್ ವಿದ್ಯಾರ್ಥಿಗಳಿಗೆ ಆತಂಕ ಆರಂಭವಾಗಿದೆ. ಹೀಗಾಗಿ ಅಫ್ಘಾನಿಸ್ತಾನ ತಾಲಿಬಾನರ ಕೈವಶವಾದ ಬೆನ್ನಲ್ಲೇ ಟಿವಿ 9 ಅಪ್ಘಾನಿಸ್ತಾನದ ವಿದ್ಯಾರ್ಥಿಗಳನ್ನು ಮಾತನಾಡಿಸಿತು.

ಈ ಹಿಂದೆ ಇದ್ದ ತಾಲಿಬಾನರ ಸರ್ಕಾರ ಸಾಕಷ್ಟು ಕ್ರೌರ್ಯ ಮೆರೆದಿತ್ತು. ಈ ಹಿನ್ನೆಲೆ ಜೀವ ಉಳಿಸಿಕೊಳ್ಳಲು ಹೆದರಿ ದೇಶ ತೊರೆಯುತ್ತಿದ್ದಾರೆ. ನಾವು ನಮ್ಮ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಅವರ ಪ್ರಕಾರ ಈ ಬಾರೀ ಕ್ರೌರ್ಯ, ಅಟ್ಟಹಾಸ ಮೆರೆಯದೆ ಅಫ್ಘಾನಿಸ್ತಾನ್ ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ಇಲ್ಲಿ ಏನೂ ತೊಂದರೆ ಇಲ್ಲ ಅಂತ ಕುಟುಂಬಸ್ಥರು ಹೇಳಿದ್ದಾರೆ. ಆದರೂ ಅಲ್ಲಿನ ಪರಿಸ್ಥಿತಿ ನೋಡಿದ್ರೆ ನಮಗೆ ಭಯ ಆಗುತ್ತಿದೆ. ಮುಂದೆ ಏನಾಗುತ್ತೆ ಅಂತ ಹೇಳೋಕೆ ಸಾಧ್ಯ ಆಗುತ್ತಿಲ್ಲ. ಇಂದಿನವರೆಗೂ ಎಲ್ಲ ಸರಿಯಿದ್ದರೂ ಸಹ, ನಾಳೆ ಏನು ಬೇಕಾದರೂ ಆಗುವ ಸ್ಥಿತಿ ಅಲ್ಲಿದೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: 

ಮರಳಿ ತಾಯ್ನಾಡಿಗೆ ಬರಬೇಡ, ಭಾರತದಲ್ಲೇ ಉಳಿದುಬಿಡು ಎನ್ನುತ್ತಿದ್ದಾರೆ ಪೋಷಕರು; ಮೈಸೂರಿನಲ್ಲಿರುವ ಅಪ್ಘನ್ ವಿದ್ಯಾರ್ಥಿಗಳ ಅಳಲು

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

(Afghanistan Crisis reports says 15 Illegal residence of Afghan citizens in Bengaluru)

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?