AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on: Sep 09, 2023 | 9:51 AM

Share

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ