Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
Follow us
Prajwal Kumar NY
| Updated By: Rakesh Nayak Manchi

Updated on: Sep 09, 2023 | 9:51 AM

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?