AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 09, 2023 | 9:51 AM

Share

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು