AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 09, 2023 | 9:51 AM

Share

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ