AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ

ರ್ಯಾಪಿಡೋ ಬೈಕ್​ನಲ್ಲಿ ವ್ಯಕ್ತಿಯೊಬ್ಬರನ್ನು ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಸುಲಿಗೆ ಮಾಡಿದ ಘಟನೆ ಬೆಂಗಳೂರು ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Rapido ಬೈಕ್​ನಲ್ಲಿ ಕಿಡ್ನಾಪ್, ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ, ಸುಲಿಗೆ
Rapido ಬೈಕ್​ನಲ್ಲಿ ಕಿಡ್ನಾಪ್ ಮಾಡಿ ಸುಲಿಗೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on: Sep 09, 2023 | 9:51 AM

Share

ಬೆಂಗಳೂರು, ಸೆ.9: ಯುವಕನೊಬ್ಬನನ್ನು ರ್ಯಾಪಿಡೋ ಬೈಕ್​ನಲ್ಲಿ (Rapido Bike) ಕಿಡ್ನಾಪ್ ಮಾಡಿ ರೂಮ್​ನಲ್ಲಿ ಕೂಡಿಹಾಕಿ ಸುಲಿಗೆ ನಡೆಸಿದ ಘಟನೆ ನಗರದ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಗಿರಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮನು ಎಂಬವರು ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್​ ಅನ್ನು ಏರುತ್ತಿದ್ದಂತೆ ಚಾಲಕ ಚಾಕು ತೋರಿಸಿ ಮನುನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ರೂಮ್​ಗೆ ಕರೆದೊಯ್ದು ಹಲ್ಲೆ ನಡೆಸಿ ಫೋನ್ ಪೇ ಮೂಲಕ ಮೂರು ಸಾವಿರ ರೂ. ವರ್ಗಾಯಿಸಿ ಪರಾರಿಯಾಗಿದ್ದಾನೆ.

ಪವನ್ ಎಂಬಾತ ಕಿಡ್ನಾಪ್ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ನಂತರ ಮನು ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಕಷ್ಟಕ್ಕೆ ಮರುಗಿದ ರ್ಯಾಪಿಡೋ ಚಾಲಕನಿಗೇ ವಂಚಿಸಿದ ಗ್ರಾಹಕ

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ರ್ಯಾಪಿಡೋ ಬೈಕ್​ನಿಂದ ಆಗುವ ಅನಾಹುತಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಮಣಿಪುರದಲ್ಲಿ ನಡೆದ ಮಹಿಳೆಯ ಬೆತ್ತಲೆ ಮೆರವಣಿಗೆ ಖಂಡಿಸಿ ನಗರದ ಟೌನ್​ಹಾಲ್​ನಲ್ಲಿ ನಡೆದ ಪ್ರತಿಘಟನೆಯಲ್ಲಿ ಭಾಗಿಯಾದ ಯುವತಿಯೊಬ್ಬಳಿಗೆ ರ್ಯಾಪಿಡೋ ಬೈಕ್ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ನಡೆದಿತ್ತು.

ಪ್ರತಿಭಟನೆ ನಂತರ ಮನೆಗೆ ವಾಪಸ್ ಆಗಲು ಯುವತಿಯೊಬ್ಬಳು ರ್ಯಾಪಿಡೊ ಆಟೋ ಬುಕ್ ಮಾಡಿದ್ದಳು. ಇದು ಕ್ಯಾನ್ಸಲ್ ಆದ ಹಿನ್ನೆಲೆ ರ್ಯಾಪಿಡೊ ಬೈಕ್ ಬುಕ್ ಮಾಡಿದ್ದಳು. ಅದರಂತೆ ಸ್ಥಳಕ್ಕೆ ಆಗಮಿಸಿದ ಬೈಕ್ ಹತ್ತಿದ ಯುವತಿಗೆ ಚಾಲಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗ ಮಧ್ಯ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಡ್ರಾಪ್ ಮಾಡಿದ ನಂತರ ಬೈಕ್ ಚಾಲಕ ಯುವತಿಯ ಮೊಬೈಲ್​ಗೆ ಕರೆ ಮಾಡಿ ಕಿರುಕುಳ ನೀಡಿದ್ದನು. ಈ ಬಗ್ಗೆ ನೊಂದ ಯುವತಿ ಟ್ವೀಟ್ ಮಾಡಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ